ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ನೆಹರು ಯುವ ಕೆಂದ್ರ ಮಂಗಳೂರು ಹಾಗೂ ಅಂಚೆ ಇಲಾಖೆ ಇದರ ಸಹಯೋಗದೊಂದಿಗೆ ನನ್ನ ಮಣ್ಣು ನನ್ನ ದೇಶ ಅಮೃತ ಕಳಶ ಯಾತ್ರೆ ಕಾರ್ಯಕ್ರಮವು ಅ. 17 ರಂದು ತಾಲೂಕು ಪಂಚಾಯತ್ ನಲ್ಲಿ ಹಮ್ಮಿಕೊಳ್ಳಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ರಾಷ್ಟ್ರವನ್ನು ಕಟ್ಟುವ ಯುವಜನತೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಹೆಚ್ಚಿದ್ದು, ಎಲ್ಲರೂ ಜವಾಬ್ದಾರಿಯುತ ಕೆಲಸಗಳಲ್ಲಿ ಕಾಣಿಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಮೂಲ ಎಂದರೆ ಅದು ಗ್ರಾಮ ಪಂಚಾಯತ್ ಹೀಗಾಗಿ ಮೂಡುಬಿದಿರೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಒಟ್ಟು 12 ಗ್ರಾಮ ಪಂಚಾಯತ್ಗಳ ಬೆಂಬಲದಿಂದ ನೆಲದ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗಿದೆ ಎಂದರು.
ಇದೇ ವೇಳೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಬಳಿಕ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕರಾದ ವೈಷ್ಣವ್ ಹೆಗ್ಡೆ ಇವರಿಗೆ ಪವಿತ್ರ ಮಣ್ಣು ತುಂಬಿದ ಅಮೃತ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಉಪ ಅಂಚೆ ನಿರೀಕ್ಷಕರಾದ ಪ್ರಹ್ಲಾದ್ ನಾಯಕ್ ಹಾಗೂ ಅಂಚೆ ಇಲಾಖಾ ಸಿಬ್ಬಂದಿಗಳು, ಆಳ್ವಾಸ್ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕರಾದ ವಸಂತ್, ತಾ.ಪಂ. ಪ್ರಧಾನ ವ್ಯವಸ್ಥಾಪಕರಾದ ವಸಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಸಿಬ್ಬಂದಿಗಳು ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಆಳ್ವಾಸ್ ಕಾಲೇಜು ಎನ್ ಎಸ್ ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…