ಜನ ಮನದ ನಾಡಿ ಮಿಡಿತ

Advertisement

ದನಗಳನ್ನು ಕಡಿದು, ತ್ಯಾಜ್ಯಗಳನ್ನು ರಸ್ತೆಗೆಸದ ಕಿಡಿಗೇಡಿಗಳು

ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ.


ಕಲ್ಲಡ್ಕ – ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ ದನದ ಬೇರೆ ಬೇರೆ ಭಾಗವನ್ನು ಎಸೆದು ಹೋದ ಘಟನೆ ನಡೆದಿದ್ದು, ಇದನ್ನು ನೋಡಿದ ಸ್ಥಳೀಯರು ಗ್ರಾ.ಪಂ.ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.


ಗ್ರಾ.ಪಂ.ಸದಸ್ಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ವಿಟ್ಲ ಪೋಲಿಸರು ‌ಬೇಟಿ ನೀಡಿ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮೇಲ್ನೋಟಕ್ಕೆ ದನಗಳ ಕೈ ಕಾಲು,ಚರ್ಮ,ಹಲ್ಲು,ತಲೆಯ ಭಾಗದಂತೆ ಕಂಡು ಬಂದಿದ್ದುಹೆಚ್ಚಿನ ಮಾಹಿತಿಯನ್ನು ತನಿಖೆಯ‌ಬಳಿಕ ಪೊಲೀಸರು ತಿಳಿಸಬೇಕಾಗಿದೆ.
ಈ ಸ್ಥಳದಲ್ಲಿ ಇದು ಮೊದಲ ಬಾರಿ ಎಸೆದು ಹೋಗಿರುವ ಪ್ರಸಂಗ ಅಲ್ಲ.ಅನೇಕ ಬಾರಿ ಇದೇ ರೀತಿ ತ್ಯಾಜ್ಯವನ್ನು ಎಸೆದು ಹೋಗಿದ್ದಾರೆ ಎಂಬ ವಿಚಾರವನ್ನು ಸ್ಥಳೀಯರು ತಿಳಿಸಿದ್ದಾರೆ.
ಇಂತಹ ಸಮಾಜಘಾತುಕ ಕಾರ್ಯವನ್ನು ಯಾರು ಮಾಡುತ್ತಿದ್ದಾರೆ ಎಂಬುದರ ತನಿಖೆ ಮಾಡುತ್ತೇವೆ, ಅಂತಹವರ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಭರವಸೆಯನ್ನು ಪೋಲೀಸರು ‌ನೀಡಿದ್ದಾರೆ.
ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಗ್ರಾ.ಪಂ.ಹೆಚ್ಚಿನ ನಿಗಾ ವಹಿಸಬೇಕಾಗಿದೆ.
ಇಂತಹ ಘಟನೆಗಳು ಅಶಾಂತಿಗೆ ಕಾರಣವಾಗಬಹುದಾದ ಹಿನ್ನೆಲೆಯಲ್ಲಿ ಗ್ರಾಮಪಂಚಾಯತ್ ಅಲ್ಲಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸುವ ಕಾರ್ಯ ಮಾಡಬೇಕು ಎಂಬುದು ಸ್ಥಳೀಯರ ಮಾತು.
‌‌

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!