ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ.
ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…