ಬಂಟ್ವಾಳ: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ ಸುತ್ತೋಲೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದು,ಕರ್ನಾಟಕ ಕಾಂಗ್ರೆಸ್ ಸರಕಾರದ ಈ ಧೋರಣೆಯನ್ನು ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಖಂಡಿಸಿದ್ದಾರೆ.
ಈ ಕುರಿತು ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಲಿಖಿತ ಪತ್ರ ಬರೆದಿರುವ ಅವರು, ಈ ಆದೇಶವನ್ನುತಕ್ಷಣದಿಂದ ವಾಪಾಸ್ ಪಡೆದು ಅನಾದಿಕಾಲದಿಂದಲೂ ಹಿಂದೂ ಧಾರ್ಮಿಕ ಪದ್ದತಿಯಂತೆ ಆಯುಧಪೂಜೆಯನ್ನು ಯಥಾವತ್ತಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಕುಂಕುಮ, ವಿಭೂತಿ ಇವಗಳೆಲ್ಲವನ್ನು ಹಿಂದೂ ಧರ್ಮದ ಆಚರಣೆಗಳಲ್ಲಿ ಬಳಕೆ ಮಾಡಿ ಬಳಿಕ ಭಕ್ತರಿಗೆ ಹಂಚುವ ಕ್ರಮ ಪುರಾತನದಿಂದಲೂ ನಡೆದು ಕೊಂಡು ಬಂದಿರುವ ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಿ ಆಯುಧ ಪೂಜೆ ನೆರವೇರಿಸಲು ಮುಂದಾಗಿರುವ ಸರಕಾರದ ಕ್ರಮ ಸಮಂಜಸವಲ್ಲ ಎಂದು ಪ್ರಭು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ಮುಂದುವರಿದರೆ ಕ್ಷುಲ್ಲಕ ನೆಪವೊಡ್ಡಿ ಆಯುಧ ಪೂಜೆಯನ್ನೇ ನಿಷೇಧಿಸಲು ಕಾಂಗ್ರೆಸ್ ಸರಕಾರ ಮುಂದಾದರೂ ಅಚ್ಚರಿಪಡಬೇಕಾಗಿಲ್ಲ,ಈ ನಿಟ್ಟಿನಲ್ಲಿಸಮಸ್ತ ಹಿಂದೂ ಸಮಾಜದ
ಪರವಾಗಿ ಈ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…