ಬಂಟ್ವಾಳ: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ ಸುತ್ತೋಲೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದು,ಕರ್ನಾಟಕ ಕಾಂಗ್ರೆಸ್ ಸರಕಾರದ ಈ ಧೋರಣೆಯನ್ನು ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಖಂಡಿಸಿದ್ದಾರೆ.
ಈ ಕುರಿತು ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಲಿಖಿತ ಪತ್ರ ಬರೆದಿರುವ ಅವರು, ಈ ಆದೇಶವನ್ನುತಕ್ಷಣದಿಂದ ವಾಪಾಸ್ ಪಡೆದು ಅನಾದಿಕಾಲದಿಂದಲೂ ಹಿಂದೂ ಧಾರ್ಮಿಕ ಪದ್ದತಿಯಂತೆ ಆಯುಧಪೂಜೆಯನ್ನು ಯಥಾವತ್ತಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಕುಂಕುಮ, ವಿಭೂತಿ ಇವಗಳೆಲ್ಲವನ್ನು ಹಿಂದೂ ಧರ್ಮದ ಆಚರಣೆಗಳಲ್ಲಿ ಬಳಕೆ ಮಾಡಿ ಬಳಿಕ ಭಕ್ತರಿಗೆ ಹಂಚುವ ಕ್ರಮ ಪುರಾತನದಿಂದಲೂ ನಡೆದು ಕೊಂಡು ಬಂದಿರುವ ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಿ ಆಯುಧ ಪೂಜೆ ನೆರವೇರಿಸಲು ಮುಂದಾಗಿರುವ ಸರಕಾರದ ಕ್ರಮ ಸಮಂಜಸವಲ್ಲ ಎಂದು ಪ್ರಭು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ಮುಂದುವರಿದರೆ ಕ್ಷುಲ್ಲಕ ನೆಪವೊಡ್ಡಿ ಆಯುಧ ಪೂಜೆಯನ್ನೇ ನಿಷೇಧಿಸಲು ಕಾಂಗ್ರೆಸ್ ಸರಕಾರ ಮುಂದಾದರೂ ಅಚ್ಚರಿಪಡಬೇಕಾಗಿಲ್ಲ,ಈ ನಿಟ್ಟಿನಲ್ಲಿಸಮಸ್ತ ಹಿಂದೂ ಸಮಾಜದ
ಪರವಾಗಿ ಈ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…