ಉಡುಪಿ: ಅಂಜಾರು ಗ್ರಾಮದ ಕಾಜರಗುತ್ತು ರಸ್ತೆಯ ಕಲ್ಲಂಬೆಟ್ಟು ಎಂಬಲ್ಲಿ ನಡೆದ ಬೈಕ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಪು ಮಲ್ಲಾರು ಗ್ರಾಮದ ಸೂರಜ್ ಕೋಟ್ಯಾನ್(31) ಬಂಧಿತ ಆರೋಪಿ. ಅ.17ರಂದು ಬಡಗಬೆಟ್ಟು ಗ್ರಾಮದ ಸಂದೀಪ್ ನಾಯ್ಕ್ ಎಂಬವರು ತನ್ನ ಬೈಕ್ ನಿಲ್ಲಿಸಿ ರಸ್ತೆ ಬದಿ ಫೋನ್ ಮಾತನಾಡುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು, ಸಂದೀಪ್ ನಾಯ್ಕ್ರನ್ನು ದೂಡಿ ಅವರ ಬೈಕ್ನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿ, ಬೈಕ್ನ್ನು ವಶಪಡಿಸಿಕೊಂಡಿದ್ದಾರೆ



