ಸುರತ್ಕಲ್: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಹೊಯ್ಗೆಬೈಲ್ ಬಳಿಯ ಸ್ಕೇಟಿಂಗ್ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ನಲ್ಲಿ ಕುಳಾಯಿ ರೆಹಾನಾ ಸ್ಕೂಲ್ ನ ವಿದ್ಯಾರ್ಥಿ ಅಕ್ಷರ್ ಜೆ ಶೆಟ್ಟಿ ಸುರತ್ಕಲ್ ಕ್ವಾಡ್ 1 ಲ್ಯಾಪ್ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಅಕ್ಷರ್ ಜೆ ಶೆಟ್ಟಿ ಪ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಹೆಚ್ ಪಿಸಿಎಲ್ ಉದ್ಯೋಗಿ ಚಿತ್ರಾ ಜೆ ಶೆಟ್ಟಿಯವರ ಪುತ್ರ. ಈತ ಅನಘ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ದೀಪಾಂಶು ಅವರಿಂದ ತರಬೇತಿ ಪಡೆಯುತ್ತಿದ್ದಾನೆ. ಸಾಧಕ ಸ್ಕೇಟಿಂಗ್ ಪಟುಗಳಿಗೆ ಮೇಯರ್ ಸುಧೀರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಕಾರ್ಪೋರೇಟರ್ ಗಣೇಶ್ ಕುಲಾಲ್, ದ.ಕ. ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಅಧ್ಯಕ್ಷ ಫ್ರಾನ್ಸಿಸ್ ಕೊನ್ಸೆಸೋ, ಕಾರ್ಯದರ್ಶಿ ಮಹೇಶ್ ಕುಮಾರ್, ಪ್ರವೀಣ್ ಕುಮಾರ್, ಸಂತೋಷ್ ಶೆಟ್ಟಿ, ಜಯರಾಜ್, ಲೆಸ್ಟರ್ ಡಿ ಸೋಜ, ಉಮೇಶ್ ಗಟ್ಟಿ, ಅರ್ಶದ್ ಮತ್ತು ಮುಖ್ಯ ತೀರ್ಪುಗಾರ ಅಂತೋಣಿ ಜೇಮ್ಸ್ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…