ದಕ್ಷಿಣ ಕನ್ನಡ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ, ಕಂಬಳಕ್ಕಾಗಿ ನಿರ್ಮಿಸಿರುವ ‘ಬೆಂಗಳೂರು ಕಂಬಳ ನಮ್ಮ ಕಂಬಳ ಕಚೇರಿ’ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.
ಪುತ್ತೂರು ಶಾಸಕರ ನೇತೃತ್ವದಲ್ಲಿ ಮೊತ್ತ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿರುವ, ಕರಾವಳಿ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅದ್ದೂರಿಯಾಗಿ ನಡೆಯಲು ಈಗಾಗಲೇ ಸಿದ್ಧತೆ ನಡೆಸಿದ್ದು, ಕಂಬಳದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬೇಕಾದ ಕಚೇರಿಯನ್ನು ಇಂದು ಹಿರಿಯರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ತೆರೆಯಲಾಗಿದೆ, ಮುಂದಿನ ದಿನಗಳಲ್ಲಿ ಬೆಂಗಳೂರು ಕಂಬಳಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಕಚೇರಿಯಿಂದ ನಿರ್ವಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ ಈ ವೇಳೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ದಿನೇಶ್ ಹೆಗಡೆ, ಕಾರ್ಯಾಧ್ಯಕ್ಷ ಗುರುಕಿರಣ್, ಖಜಾಂಚಿ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಜೇಂದ್ರಕುಮಾರ್, ಕಾರ್ಯಾಧ್ಯಕ್ಷ ಉಮೇಶ್ ಶೆಟ್ಟಿ, ಉದಯ್ ಶೆಟ್ಟಿ, ಜಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…