ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ; ಸಾಧಕರಿಗೆ ಗೌರವ ಪುರಸ್ಕಾರ ಪ್ರದಾನ

ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ) ಇದರ ವತಿಯಿಂದ ನಡೆದ ಮೂಡುಬಿದಿರೆ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಾಲ್ಕನೇ ದಿನದಂದು ಹಿರಿಯ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಮೂಡುಬಿದಿರೆಯ ಖ್ಯಾತ ತಜ್ಞ ವೈದ್ಯ ಡಾ.ಹರೀಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಯಕ್ಷಗಾನ-ಸ್ವರೂಪ ಮತ್ತು ನಾವೀನ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಜೋಶಿ ಅವರು ಜಗತ್ತಿನ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದು. ಇಂದಿನ ದಿನಗಳಲ್ಲಿ ಯಕ್ಷಗಾನದಲ್ಲೂ ಆಧುನಿಕತೆ ಹಾಸು ಹೊಕ್ಕಿದೆ. ಯಕ್ಷಗಾನ ಕಲೆಯು ಅಭಿವೃದ್ಧಿಯಾಗಬೇಕು ಆದರೆ ಅದು ಜನಾಕರ್ಷಣೆಯಾಗಬೇಕೆಂದು ಕಲೆಯನ್ನು ಬಲಿಕೊಡಬಾರದು. ಕೆಟ್ಟ ಸಂಗತಿಗಳು ವೈರಸ್ ನಂತೆ ಒಳ ಹೊಕ್ಕರೆ ಅದು ಹೊರಗೆ ಬರಲು ಕಷ್ಟಸಾಧ್ಯ ಇದನ್ನು ಯಕ್ಷಗಾನ ಮೇಳದ ಯಜಮಾನರುಗಳು, ಕಲಾವಿದರು ಮತ್ತು ಪ್ರೇಕ್ಷಕರು ಅರಿತುಕೊಳ್ಳಬೇಕಾಗಿದೆ. ದೇವಸ್ಥಾನದ ಸುಪರ್ದಿಯಲ್ಲಿ ಬರುವಂತಹ ಮೇಳಗಳು ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಸಮಾಜ ಮಂದಿರ ಗೌರವ 2023 ಪುರಸ್ಕಾರ ಪ್ರದಾನ : ಮೂಡುಬಿದಿರೆಯ ವಿವಿಧ ರಂಗಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವ ರಾಮಕೃಷ್ಣ ಶಿರೂರು (ಶಿಕ್ಷಣ, ಸಂಘಟನೆ) ಸಿಸ್ಟರ್ ಪ್ರೆಸಿಲ್ಲಾ (ಅನಾಥರ ಸೇವೆ) – ಶ್ರೀಮತಿ ಸಂಧ್ಯಾ (ಪರಿಸರ, ಶೂನ್ಯ ತ್ಯಾಜ್ಯ ಕಾಳಜಿ),ಎಸ್. ಸುರೇಂದ್ರ ಪೈ ಪುತ್ತಿಗೆ (ಯಕ್ಷಗಾನ ಚಿಕ್ಕಮೇಳ), ಕು. ಪ್ರೇಮಶ್ರೀ ಕಲ್ಲಬೆಟ್ಟು (ಪತ್ರಿಕೋದ್ಯಮ) ಧೀರಜ್ ಕುಮಾರ್ ಕೊಳ್ಕೆ(ಸಮಾಜ ಸೇವೆ) ಇವರಿಗೆ ಸಮಾಜ ಮಂದಿರ ಗೌರವ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.


ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಸಂಚಾಲಕ ಡಾ.ಪುಂಡಿಕೈ ಗಣಪಯ್ಯ ಭಟ್, ಸಮಾಜ ಮಂದಿರ ಸಭಾದ ಟ್ರಸ್ಟಿಗಳು ಉಪಸ್ಥಿತರಿದ್ದರು.


ಪತ್ರಕರ್ತ ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಮಂದಿರ ಸಭಾದ ಜತೆ ಕಾರ್ಯದರ್ಶಿ ಎಂ.ಗಣೇಶ್ ಕಾಮತ್ ಪುರಸ್ಕೃತರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಎಂ.ರೂಪೇಶ್ ಕುಮಾರ್ ನಿರ್ದೇಶನದಲ್ಲಿ ಟಾಪ್ ಎಂಟರ್ ಟೈನರ್ಸ್ ಡ್ಯಾನ್ಸ್ ಅಕಾಡೆಮಿ ಮೂಡುಬಿದಿರೆ ಇವರಿಂದ ‘ನೃತ್ಯ ವೈವಿಧ್ಯ’ ಪ್ರಸ್ತುತಗೊಂಡಿತು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!