ನವ ರಾತ್ರಿಯ ದಿನದಲ್ಲಿ ನಮ್ಮ ಮನಸ್ಸಿನಲ್ಲಿ ಭಕ್ತಿಯ ಸನ್ಮಾರ್ಗದತ್ತ ಸಾಗಲು ವಿಶೇಷ ಆರಾಧನೆ ನಡೆಸಿದರೆ ಯಶಸ್ಸು ಸಾದ್ಯವಿದೆ . ಪಾದಯಾತ್ರೆಯಂತಹ ಪವಿತ್ರ ಸೇವೆಯನ್ನು ಅನುಭವಿಸಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ 6 ನೇ ವರ್ಷದ ಅಮ್ಮನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ವಿಶೇಷವಾಗಿ ಸoಯೋಜಿಸಿತ್ತು.
ಮುಂಜಾನೆ 5:30ಕ್ಕೆ ಶ್ರೀ ಕ್ಷೇತ್ರ ತೋಕೂರಿನಿಂದ ಪಾದಯಾತ್ರೆ ಪ್ರಾರಂಭಗೊಂಡು ದಾರಿಯುದ್ದಕ್ಕೂ ಭಜನೆಯ ಹಾಡುಗಳನ್ನು ದೇವರ ನಾಮ ಸ್ಮರಣೆಯನ್ನು ಮಾಡುತ್ತಾ ಶ್ರೀ ಕ್ಷೇತ್ರ ಕಟೀಲಿಗೆ 7:30 ಕ್ಕೆ ತಲುಪಿ ಶ್ರೀ ದೇವರ ದರ್ಶನ ಪಡೆಯಲಾಯಿತು.
ಕ್ಲಬ್ ಅಧ್ಯಕ್ಷ ಜಗದೀಶ್ ಕುಲಾಲ್, ಉಪಾಧ್ಯಕ್ಷ ಸುನಿಲ್ ದೇವಾಡಿಗ, ಕಾರ್ಯದ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ಯಶೋಧಾ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಪ್ರಮುಖರಾದ ಸುರೇಶ್ ದೇವಾಡಿಗ, ಮಹೇಶ್ ಸುವರ್ಣ, ಚಂದ್ರಶೇಖರ ದೇವಾಡಿಗ, ಗೌತಮ್ ಬೆಲ್ಚೆಡ್, ಗಣೇಶ್ ದೇವಾಡಿಗ, ಪ್ರದೀಪ್ ದೇವಾಡಿಗ, ಸುರೇಖಾ, ಪ್ರಮೀಳಾ.ಕೆ.ದೇವಾಡಿಗ, ಶೋಭಾ.ವಿ. ಅಂಚನ್, ವಾಣಿ ಮಹೇಶ್, ನೀಮಾ ಸನಿಲ್ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ,ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…