ನವ ರಾತ್ರಿಯ ದಿನದಲ್ಲಿ ನಮ್ಮ ಮನಸ್ಸಿನಲ್ಲಿ ಭಕ್ತಿಯ ಸನ್ಮಾರ್ಗದತ್ತ ಸಾಗಲು ವಿಶೇಷ ಆರಾಧನೆ ನಡೆಸಿದರೆ ಯಶಸ್ಸು ಸಾದ್ಯವಿದೆ . ಪಾದಯಾತ್ರೆಯಂತಹ ಪವಿತ್ರ ಸೇವೆಯನ್ನು ಅನುಭವಿಸಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ 6 ನೇ ವರ್ಷದ ಅಮ್ಮನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ವಿಶೇಷವಾಗಿ ಸoಯೋಜಿಸಿತ್ತು.
ಮುಂಜಾನೆ 5:30ಕ್ಕೆ ಶ್ರೀ ಕ್ಷೇತ್ರ ತೋಕೂರಿನಿಂದ ಪಾದಯಾತ್ರೆ ಪ್ರಾರಂಭಗೊಂಡು ದಾರಿಯುದ್ದಕ್ಕೂ ಭಜನೆಯ ಹಾಡುಗಳನ್ನು ದೇವರ ನಾಮ ಸ್ಮರಣೆಯನ್ನು ಮಾಡುತ್ತಾ ಶ್ರೀ ಕ್ಷೇತ್ರ ಕಟೀಲಿಗೆ 7:30 ಕ್ಕೆ ತಲುಪಿ ಶ್ರೀ ದೇವರ ದರ್ಶನ ಪಡೆಯಲಾಯಿತು.
ಕ್ಲಬ್ ಅಧ್ಯಕ್ಷ ಜಗದೀಶ್ ಕುಲಾಲ್, ಉಪಾಧ್ಯಕ್ಷ ಸುನಿಲ್ ದೇವಾಡಿಗ, ಕಾರ್ಯದ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ಯಶೋಧಾ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಪ್ರಮುಖರಾದ ಸುರೇಶ್ ದೇವಾಡಿಗ, ಮಹೇಶ್ ಸುವರ್ಣ, ಚಂದ್ರಶೇಖರ ದೇವಾಡಿಗ, ಗೌತಮ್ ಬೆಲ್ಚೆಡ್, ಗಣೇಶ್ ದೇವಾಡಿಗ, ಪ್ರದೀಪ್ ದೇವಾಡಿಗ, ಸುರೇಖಾ, ಪ್ರಮೀಳಾ.ಕೆ.ದೇವಾಡಿಗ, ಶೋಭಾ.ವಿ. ಅಂಚನ್, ವಾಣಿ ಮಹೇಶ್, ನೀಮಾ ಸನಿಲ್ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ,ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…