ಜನ ಮನದ ನಾಡಿ ಮಿಡಿತ

Advertisement

ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಗಡಿನಾಡ ಕವಿ ಭಾವಸಂಗಮ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಗಡಿನಾಡ ಕವಿ ಭಾವಸಂಗಮ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.

ಕವಿಗೋಷ್ಠಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಮಾಜದ ಒಳಿತು ಕೆಡುಕುಗಳ ಮೇಲೆ ಸಾಹಿತ್ಯ ಅಗಾಧ ಪರಿಣಾಮ ಬೀರುತ್ತದೆ. ಉತ್ತಮ ಸಾಹಿತ್ಯ ಸಾರ್ವಕಾಲಿಕವಾಗಿ ಜನಮಾನಸದಲ್ಲಿ ಉಳಿಯುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಚಿತ್ತ ಹರಿಸಬೇಕೆಂದು ತಿಳಿಸಿದರು.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ ಸಾಹಿತಿ ಬಾಲಕೃಷ್ಣ ಬೇರಿಕೆ ಮಾತನಾಡಿ ನಿರಂತರ ಪರಿಶ್ರಮ, ಆಸಕ್ತಿ, ಅಧ್ಯಯನ, ಮಹಾನ್ ಕವಿಗಳ ಸಾಹಿತ್ಯ ಮಂಥನ ಭವಿಷ್ಯದ ಸಾಹಿತಿಗಳಿಗೆ ಪ್ರೇರಕವಾಗಿದೆ.
ಶ್ರದ್ಧಾಕೇಂದ್ರಗಳಲ್ಲಿ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಕ್ಕಾಗ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ ಎಂದರು.
ನಾರಾಯಣ ನಾಯ್ಕ ಕುದುಕ್ಕೊಳಿ, ವಿಷ್ಣುಗುಪ್ತ ಪುಣಚ, ವನಜಾಕ್ಷಿ ಚಂಬ್ರಕಾನ, ಸುಶ್ಮಿತಾ ಕುಕ್ಕಾಜೆ, ದೀಕ್ಷಿತ್ ಮಾಣಿಲ, ಅನುರಾಧ ಪಳನೀರು, ನವ್ಯಶ್ರೀ ಕಾಮಜಾಲು ಕವನ ವಾಚಿಸಿದರು.
ಯುವ ಸಾಹಿತಿ ಉದಯ ಭಾಸ್ಕರ್ ಸುಳ್ಯ, ಕವಯತ್ರಿ ಸುಜಾತ ಮಾಣಿಮೂಲೆ ಕವನಗಳ ವಿಮರ್ಶೆ ನಡೆಸಿದರು.
ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಹಿರಿಯ ಸಾಹಿತಿ ಸುಂದರ ಬಾರಡ್ಕ ಭಾಗವಹಿಸಿದ್ದರು.
ದೇವಿಪ್ರಸಾದ್ ಕುಕ್ಕಾಜೆ ಸ್ವಾಗತಿಸಿದರು. ರವಿ ಎಸ್.ಎಂ ವಂದಿಸಿದರು.ಸಾಹಿತಿ ಜಯ ಮಣಿಂಯಪಾರೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!