ಜನ ಮನದ ನಾಡಿ ಮಿಡಿತ

Advertisement

ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಗಡಿನಾಡ ಕವಿ ಭಾವಸಂಗಮ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಗಡಿನಾಡ ಕವಿ ಭಾವಸಂಗಮ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.

ಕವಿಗೋಷ್ಠಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಮಾಜದ ಒಳಿತು ಕೆಡುಕುಗಳ ಮೇಲೆ ಸಾಹಿತ್ಯ ಅಗಾಧ ಪರಿಣಾಮ ಬೀರುತ್ತದೆ. ಉತ್ತಮ ಸಾಹಿತ್ಯ ಸಾರ್ವಕಾಲಿಕವಾಗಿ ಜನಮಾನಸದಲ್ಲಿ ಉಳಿಯುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಚಿತ್ತ ಹರಿಸಬೇಕೆಂದು ತಿಳಿಸಿದರು.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ ಸಾಹಿತಿ ಬಾಲಕೃಷ್ಣ ಬೇರಿಕೆ ಮಾತನಾಡಿ ನಿರಂತರ ಪರಿಶ್ರಮ, ಆಸಕ್ತಿ, ಅಧ್ಯಯನ, ಮಹಾನ್ ಕವಿಗಳ ಸಾಹಿತ್ಯ ಮಂಥನ ಭವಿಷ್ಯದ ಸಾಹಿತಿಗಳಿಗೆ ಪ್ರೇರಕವಾಗಿದೆ.
ಶ್ರದ್ಧಾಕೇಂದ್ರಗಳಲ್ಲಿ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಕ್ಕಾಗ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ ಎಂದರು.
ನಾರಾಯಣ ನಾಯ್ಕ ಕುದುಕ್ಕೊಳಿ, ವಿಷ್ಣುಗುಪ್ತ ಪುಣಚ, ವನಜಾಕ್ಷಿ ಚಂಬ್ರಕಾನ, ಸುಶ್ಮಿತಾ ಕುಕ್ಕಾಜೆ, ದೀಕ್ಷಿತ್ ಮಾಣಿಲ, ಅನುರಾಧ ಪಳನೀರು, ನವ್ಯಶ್ರೀ ಕಾಮಜಾಲು ಕವನ ವಾಚಿಸಿದರು.
ಯುವ ಸಾಹಿತಿ ಉದಯ ಭಾಸ್ಕರ್ ಸುಳ್ಯ, ಕವಯತ್ರಿ ಸುಜಾತ ಮಾಣಿಮೂಲೆ ಕವನಗಳ ವಿಮರ್ಶೆ ನಡೆಸಿದರು.
ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಹಿರಿಯ ಸಾಹಿತಿ ಸುಂದರ ಬಾರಡ್ಕ ಭಾಗವಹಿಸಿದ್ದರು.
ದೇವಿಪ್ರಸಾದ್ ಕುಕ್ಕಾಜೆ ಸ್ವಾಗತಿಸಿದರು. ರವಿ ಎಸ್.ಎಂ ವಂದಿಸಿದರು.ಸಾಹಿತಿ ಜಯ ಮಣಿಂಯಪಾರೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!