ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಗಡಿನಾಡ ಕವಿ ಭಾವಸಂಗಮ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.
ಕವಿಗೋಷ್ಠಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಮಾಜದ ಒಳಿತು ಕೆಡುಕುಗಳ ಮೇಲೆ ಸಾಹಿತ್ಯ ಅಗಾಧ ಪರಿಣಾಮ ಬೀರುತ್ತದೆ. ಉತ್ತಮ ಸಾಹಿತ್ಯ ಸಾರ್ವಕಾಲಿಕವಾಗಿ ಜನಮಾನಸದಲ್ಲಿ ಉಳಿಯುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಚಿತ್ತ ಹರಿಸಬೇಕೆಂದು ತಿಳಿಸಿದರು.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ ಸಾಹಿತಿ ಬಾಲಕೃಷ್ಣ ಬೇರಿಕೆ ಮಾತನಾಡಿ ನಿರಂತರ ಪರಿಶ್ರಮ, ಆಸಕ್ತಿ, ಅಧ್ಯಯನ, ಮಹಾನ್ ಕವಿಗಳ ಸಾಹಿತ್ಯ ಮಂಥನ ಭವಿಷ್ಯದ ಸಾಹಿತಿಗಳಿಗೆ ಪ್ರೇರಕವಾಗಿದೆ.
ಶ್ರದ್ಧಾಕೇಂದ್ರಗಳಲ್ಲಿ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಕ್ಕಾಗ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ ಎಂದರು.
ನಾರಾಯಣ ನಾಯ್ಕ ಕುದುಕ್ಕೊಳಿ, ವಿಷ್ಣುಗುಪ್ತ ಪುಣಚ, ವನಜಾಕ್ಷಿ ಚಂಬ್ರಕಾನ, ಸುಶ್ಮಿತಾ ಕುಕ್ಕಾಜೆ, ದೀಕ್ಷಿತ್ ಮಾಣಿಲ, ಅನುರಾಧ ಪಳನೀರು, ನವ್ಯಶ್ರೀ ಕಾಮಜಾಲು ಕವನ ವಾಚಿಸಿದರು.
ಯುವ ಸಾಹಿತಿ ಉದಯ ಭಾಸ್ಕರ್ ಸುಳ್ಯ, ಕವಯತ್ರಿ ಸುಜಾತ ಮಾಣಿಮೂಲೆ ಕವನಗಳ ವಿಮರ್ಶೆ ನಡೆಸಿದರು.
ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಹಿರಿಯ ಸಾಹಿತಿ ಸುಂದರ ಬಾರಡ್ಕ ಭಾಗವಹಿಸಿದ್ದರು.
ದೇವಿಪ್ರಸಾದ್ ಕುಕ್ಕಾಜೆ ಸ್ವಾಗತಿಸಿದರು. ರವಿ ಎಸ್.ಎಂ ವಂದಿಸಿದರು.ಸಾಹಿತಿ ಜಯ ಮಣಿಂಯಪಾರೆ ಕಾರ್ಯಕ್ರಮ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…