ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಗಡಿನಾಡ ಕವಿ ಭಾವಸಂಗಮ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.
ಕವಿಗೋಷ್ಠಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಮಾಜದ ಒಳಿತು ಕೆಡುಕುಗಳ ಮೇಲೆ ಸಾಹಿತ್ಯ ಅಗಾಧ ಪರಿಣಾಮ ಬೀರುತ್ತದೆ. ಉತ್ತಮ ಸಾಹಿತ್ಯ ಸಾರ್ವಕಾಲಿಕವಾಗಿ ಜನಮಾನಸದಲ್ಲಿ ಉಳಿಯುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಚಿತ್ತ ಹರಿಸಬೇಕೆಂದು ತಿಳಿಸಿದರು.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ ಸಾಹಿತಿ ಬಾಲಕೃಷ್ಣ ಬೇರಿಕೆ ಮಾತನಾಡಿ ನಿರಂತರ ಪರಿಶ್ರಮ, ಆಸಕ್ತಿ, ಅಧ್ಯಯನ, ಮಹಾನ್ ಕವಿಗಳ ಸಾಹಿತ್ಯ ಮಂಥನ ಭವಿಷ್ಯದ ಸಾಹಿತಿಗಳಿಗೆ ಪ್ರೇರಕವಾಗಿದೆ.
ಶ್ರದ್ಧಾಕೇಂದ್ರಗಳಲ್ಲಿ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಕ್ಕಾಗ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ ಎಂದರು.
ನಾರಾಯಣ ನಾಯ್ಕ ಕುದುಕ್ಕೊಳಿ, ವಿಷ್ಣುಗುಪ್ತ ಪುಣಚ, ವನಜಾಕ್ಷಿ ಚಂಬ್ರಕಾನ, ಸುಶ್ಮಿತಾ ಕುಕ್ಕಾಜೆ, ದೀಕ್ಷಿತ್ ಮಾಣಿಲ, ಅನುರಾಧ ಪಳನೀರು, ನವ್ಯಶ್ರೀ ಕಾಮಜಾಲು ಕವನ ವಾಚಿಸಿದರು.
ಯುವ ಸಾಹಿತಿ ಉದಯ ಭಾಸ್ಕರ್ ಸುಳ್ಯ, ಕವಯತ್ರಿ ಸುಜಾತ ಮಾಣಿಮೂಲೆ ಕವನಗಳ ವಿಮರ್ಶೆ ನಡೆಸಿದರು.
ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಬಾಳೆಕಲ್ಲು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಹಿರಿಯ ಸಾಹಿತಿ ಸುಂದರ ಬಾರಡ್ಕ ಭಾಗವಹಿಸಿದ್ದರು.
ದೇವಿಪ್ರಸಾದ್ ಕುಕ್ಕಾಜೆ ಸ್ವಾಗತಿಸಿದರು. ರವಿ ಎಸ್.ಎಂ ವಂದಿಸಿದರು.ಸಾಹಿತಿ ಜಯ ಮಣಿಂಯಪಾರೆ ಕಾರ್ಯಕ್ರಮ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…