ಜನ ಮನದ ನಾಡಿ ಮಿಡಿತ

Advertisement

ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.


ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.


ಅದಕ್ಕಾಗಿ ಟೆಂಪೋ ವನ್ನು ಕೂಡ ಮಾರಾಟ ಮಾಡಿದ್ದ ಎನ್ನಲಾಗಿದೆ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದು,ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ‌ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.


ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಈತನ ಕೋಣೆಗೆ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಈತನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿ್ದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!