ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ವನ್ನು ಕೂಡ ಮಾರಾಟ ಮಾಡಿದ್ದ ಎನ್ನಲಾಗಿದೆ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು,ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಈತನ ಕೋಣೆಗೆ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಈತನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿ್ದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…