ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು ಹಳೆಯಂಗಡಿ ಇದರ ವತಿಯಿಂದ ಮಹಾ ನವಮಿಯಂದು 25 ವರ್ಷ ಪೂರೈಸಿ ಬೆಳ್ಳಿಹಬ್ಬದ ಸಡಗರದಲ್ಲಿ “ಪಾಂಚಜನ್ಯ” ಎಂಬ ಯಕ್ಷಗಾನ ಬಯಲಾಟ ಶ್ರೀ ಕ್ಷೇತ್ರ ಕಲ್ಲಾಪು ನಲ್ಲಿ ನಡೆಯಿತು. ಈ ಒಂದು ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯಕ್ಷಗಾನ ನಿರ್ದೇಶಕರಾದ ಕಿರಣ್ ಕುಮಾರ್ ಪಡುಪಣಂಬೂರು, ಭಾಗವತರಾದ ಜಯ ದೇವಾಡಿಗ, ಶ್ರೀನಿವಾಸ, ಚಂದ್ರಕಾಂತ್, ಚೆಂಡೆಯಲ್ಲಿ ಭವಿಷ್, ವಿಘ್ನೇಶ್, ಯಕ್ಷನಾಟ್ಯ ಗುರುಗಳಾದ ಪುಷ್ಪರಾಜ್, ಪದ್ಮನಾಭ, ಶ್ರೀನಿವಾಸ ಇವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗುರಿಕಾರರಾದ ರಾಮ ಗುರಿಕಾರರು, ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು, ಅಪ್ಪು ಗುರಿಕಾರರು, ಲಕ್ಷ್ಮಣ ಗುರಿಕಾರರು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾಧರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಅಂಜನ್ ಕುಮಾರ್ ಕಲ್ಲಾಪು ನೆರವೇರಿಸಿದರು. ಸನ್ಮಾನ ಪತ್ರವನ್ನು ಮಹೇಶ್ ಕಲ್ಲಾಪು ವಾಚಿಸಿದರು. ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್ ವಂದಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…