ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು ಹಳೆಯಂಗಡಿ ಇದರ ವತಿಯಿಂದ ಮಹಾ ನವಮಿಯಂದು 25 ವರ್ಷ ಪೂರೈಸಿ ಬೆಳ್ಳಿಹಬ್ಬದ ಸಡಗರದಲ್ಲಿ “ಪಾಂಚಜನ್ಯ” ಎಂಬ ಯಕ್ಷಗಾನ ಬಯಲಾಟ ಶ್ರೀ ಕ್ಷೇತ್ರ ಕಲ್ಲಾಪು ನಲ್ಲಿ ನಡೆಯಿತು. ಈ ಒಂದು ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯಕ್ಷಗಾನ ನಿರ್ದೇಶಕರಾದ ಕಿರಣ್ ಕುಮಾರ್ ಪಡುಪಣಂಬೂರು, ಭಾಗವತರಾದ ಜಯ ದೇವಾಡಿಗ, ಶ್ರೀನಿವಾಸ, ಚಂದ್ರಕಾಂತ್, ಚೆಂಡೆಯಲ್ಲಿ ಭವಿಷ್, ವಿಘ್ನೇಶ್, ಯಕ್ಷನಾಟ್ಯ ಗುರುಗಳಾದ ಪುಷ್ಪರಾಜ್, ಪದ್ಮನಾಭ, ಶ್ರೀನಿವಾಸ ಇವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗುರಿಕಾರರಾದ ರಾಮ ಗುರಿಕಾರರು, ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು, ಅಪ್ಪು ಗುರಿಕಾರರು, ಲಕ್ಷ್ಮಣ ಗುರಿಕಾರರು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾಧರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಅಂಜನ್ ಕುಮಾರ್ ಕಲ್ಲಾಪು ನೆರವೇರಿಸಿದರು. ಸನ್ಮಾನ ಪತ್ರವನ್ನು ಮಹೇಶ್ ಕಲ್ಲಾಪು ವಾಚಿಸಿದರು. ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್ ವಂದಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…