ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು ಹಳೆಯಂಗಡಿ ಇದರ ವತಿಯಿಂದ ಮಹಾ ನವಮಿಯಂದು 25 ವರ್ಷ ಪೂರೈಸಿ ಬೆಳ್ಳಿಹಬ್ಬದ ಸಡಗರದಲ್ಲಿ “ಪಾಂಚಜನ್ಯ” ಎಂಬ ಯಕ್ಷಗಾನ ಬಯಲಾಟ ಶ್ರೀ ಕ್ಷೇತ್ರ ಕಲ್ಲಾಪು ನಲ್ಲಿ ನಡೆಯಿತು. ಈ ಒಂದು ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯಕ್ಷಗಾನ ನಿರ್ದೇಶಕರಾದ ಕಿರಣ್ ಕುಮಾರ್ ಪಡುಪಣಂಬೂರು, ಭಾಗವತರಾದ ಜಯ ದೇವಾಡಿಗ, ಶ್ರೀನಿವಾಸ, ಚಂದ್ರಕಾಂತ್, ಚೆಂಡೆಯಲ್ಲಿ ಭವಿಷ್, ವಿಘ್ನೇಶ್, ಯಕ್ಷನಾಟ್ಯ ಗುರುಗಳಾದ ಪುಷ್ಪರಾಜ್, ಪದ್ಮನಾಭ, ಶ್ರೀನಿವಾಸ ಇವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗುರಿಕಾರರಾದ ರಾಮ ಗುರಿಕಾರರು, ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು, ಅಪ್ಪು ಗುರಿಕಾರರು, ಲಕ್ಷ್ಮಣ ಗುರಿಕಾರರು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾಧರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಅಂಜನ್ ಕುಮಾರ್ ಕಲ್ಲಾಪು ನೆರವೇರಿಸಿದರು. ಸನ್ಮಾನ ಪತ್ರವನ್ನು ಮಹೇಶ್ ಕಲ್ಲಾಪು ವಾಚಿಸಿದರು. ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್ ವಂದಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…