ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರ ಹಾಗೂ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ಸಭಾಭವನದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಎಲೋಶಿಯಸ್ ಪಾವ್ಲ್ ಡಿಸೋಜಾ ಮಾತನಾಡಿ ಪುಣ್ಯಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯಲಿ ಇಂದು ಆಶೀರ್ವಚನ ನೀಡಿದರು.
ಪಕ್ಷಿಕೆರೆ ಸಂತ ಜೂದರ ಪುಣ್ಯಕ್ಷೇತ್ರದ ಧರ್ಮಗುರು ಮೆಲ್ವಿನ್ ನೊರೋಹ್ನ , ಫಾ.ರಾಬರ್ಟ್ ಪಕ್ಷಿಕೆರೆ
ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಡಿಸೋಜ, ಕಾರ್ಯದರ್ಶಿ ಸುನಿಲ್ ಮೊರಾಸ್, ಚರ್ಚ್ ನ ಗೌರವ ಸದಸ್ಯ ಹಾಗೂ ಕೆಮ್ರಾಲ್ ಗ್ರಾಪಂ ಸದಸ್ಯ ಜಾಕ್ಸನ್ ಸಲ್ದಾನ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮೂವರು ನೂತನ ಜೋಡಿಗಳಾದ ಡೆನ್ನಿಸ್ ಕುಟಿನೊ ಮಂಜೇಶ್ವರ – ಆರ್ಸಿಲ್ಲ ಅಶ್ವಿತಾ ಪಾಯಸ್ ಮಡಂತ್ಯಾರ್; ಮ್ಯಾಕ್ಸಿಮ್ ಮೊರಾಸ್ ಸಿದ್ದಕಟ್ಟೆ-ಪ್ರೀತಿಕ ಪಿಂಟೊ ವಿಜಯಡ್ಕ; ರೋಷನ್ ಫೆರ್ನಾಂಡಿಸ್ ಕಾಟಿಪಳ್ಳ- ಅವಿಲ್ಲಾ ಜ್ಯೋತಿ ವರೆದ ಪಾವೂರು ರವರು ಗುರು ಹಿರಿಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಸೆ ಮಣೆ ಏರಿದರು. ರಾಬರ್ಟ್ ಡಿಸೋಜಾ ಪಕ್ಷಿಕೆರೆ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…