ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರ ಹಾಗೂ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ಸಭಾಭವನದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಎಲೋಶಿಯಸ್ ಪಾವ್ಲ್ ಡಿಸೋಜಾ ಮಾತನಾಡಿ ಪುಣ್ಯಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯಲಿ ಇಂದು ಆಶೀರ್ವಚನ ನೀಡಿದರು.
ಪಕ್ಷಿಕೆರೆ ಸಂತ ಜೂದರ ಪುಣ್ಯಕ್ಷೇತ್ರದ ಧರ್ಮಗುರು ಮೆಲ್ವಿನ್ ನೊರೋಹ್ನ , ಫಾ.ರಾಬರ್ಟ್ ಪಕ್ಷಿಕೆರೆ
ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಡಿಸೋಜ, ಕಾರ್ಯದರ್ಶಿ ಸುನಿಲ್ ಮೊರಾಸ್, ಚರ್ಚ್ ನ ಗೌರವ ಸದಸ್ಯ ಹಾಗೂ ಕೆಮ್ರಾಲ್ ಗ್ರಾಪಂ ಸದಸ್ಯ ಜಾಕ್ಸನ್ ಸಲ್ದಾನ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮೂವರು ನೂತನ ಜೋಡಿಗಳಾದ ಡೆನ್ನಿಸ್ ಕುಟಿನೊ ಮಂಜೇಶ್ವರ – ಆರ್ಸಿಲ್ಲ ಅಶ್ವಿತಾ ಪಾಯಸ್ ಮಡಂತ್ಯಾರ್; ಮ್ಯಾಕ್ಸಿಮ್ ಮೊರಾಸ್ ಸಿದ್ದಕಟ್ಟೆ-ಪ್ರೀತಿಕ ಪಿಂಟೊ ವಿಜಯಡ್ಕ; ರೋಷನ್ ಫೆರ್ನಾಂಡಿಸ್ ಕಾಟಿಪಳ್ಳ- ಅವಿಲ್ಲಾ ಜ್ಯೋತಿ ವರೆದ ಪಾವೂರು ರವರು ಗುರು ಹಿರಿಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಸೆ ಮಣೆ ಏರಿದರು. ರಾಬರ್ಟ್ ಡಿಸೋಜಾ ಪಕ್ಷಿಕೆರೆ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…