ಜನ ಮನದ ನಾಡಿ ಮಿಡಿತ

Advertisement

ಜಿಲ್ಲೆಯಲ್ಲಿ ಉಚಿತ ಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ -ಡಾ.ಸುಧಾಕರ ಶೆಟ್ಟಿ

ಮೂಡುಬಿದಿರೆ: ಬಂಟರ ಮಹಿಳಾ ಘಟಕ ಮೂಡುಬಿದಿರೆ ಮತ್ತು ನಡ್ಯೋಡಿ ಮಹಿಳಾ ಮಂಡಲ ಮಾರ್ಪಾಡಿ-ಕಲ್ಲಬೆಟ್ಟು ಇದರ ವತಿಯಿಂದ ಆಳ್ವಾಸ್ ಹೆಲ್ತ್ ಸೆಂಟರ್ ಸಹಕಾರದೊಂದಿಗೆ ಡಾ.ಸುಧಾಕರ ಶೆಟ್ಟಿ ನೇತ್ರತ್ವದಲ್ಲಿ ಸೋಮವಾರ ನಡ್ಯೋಡಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.

This image has an empty alt attribute; its file name is WhatsApp-Image-2023-10-25-at-5.14.14-PM-1024x893.jpeg


ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ತಜ್ಞ ಡಾ.ಸುಧಾಕರ ಶೆಟ್ಟಿ ಪುಣೆ ಕಾರ್ಯಕ್ರಮವನ್ನುದ್ದೇಶಿಸಿ‌ ಮಾತನಾಡಿ ದ.ಕ ಮತ್ತು ಉಡುಪಿ ಜಿಲ್ಲೆಯ ಆಯ್ದ ಐವತ್ತು ಗ್ರಾಮಗಳಲ್ಲಿ ಶೀಘ್ರದಲ್ಲೆ ಉಚಿತ ಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ' ಪ್ರಾರಂಭಿಸಲಾಗುವುದು ಎಂದು ಹೇಳಿದರು. ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆಯು ಅವರ ಬೆಳವಣಿಗೆ ಕುಂಠಿತ ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲು ಮಿಜಾರು, ಕಟೀಲು, ಮುಲ್ಕಿ, ಎಕ್ಕಾರು, ಮಾರ್ಪಾಡಿ, ಪಡುಬಿದ್ರೆ ಸಹಿತ ಅವಳಿ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಈಗಾಗಲೇ ಸರ್ವೆ ಕಾರ್ಯಕ್ರಮ ನಡೆಯುತ್ತಿದೆ. ಡಿಸೆಂಬರ್‌ನಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಿ ನಂತರ ಉಚಿತಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ’ ಆರಂಭಿಸಲಾಗುವುದು ಎಂದು ಹೇಳಿದರು.


ನಡ್ಯೋಡಿ ಶಾಲೆಯಲ್ಲಿ ಒಟ್ಟು ೨೮ ಮಕ್ಕಳ ತಪಾಸಣೆ ನಡೆಸಲಾಯಿತು. ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ, ಕಾರ‍್ಯದರ್ಶಿ ಸೌಮ್ಯ ಎಸ್. ಶೆಟ್ಟಿ ಹಾಗೂ ಸದಸ್ಯರು ನಡ್ಯೋಡಿ ಮಹಿಳಾ ಮಂಡಲ ಅಧ್ಯಕ್ಷೆ ಗೀತಾ ಪಿ. ಶೆಟ್ಟಿ, ಕಾರ್ಯದರ್ಶಿ ಹೇಮಾವತಿ ಆರ್. ಪೂಜಾರಿ ಮತ್ತಿತರ ಸದಸ್ಯರು ಭಾಗವಹಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!