ಮೂಡುಬಿದಿರೆ: ಬಂಟರ ಮಹಿಳಾ ಘಟಕ ಮೂಡುಬಿದಿರೆ ಮತ್ತು ನಡ್ಯೋಡಿ ಮಹಿಳಾ ಮಂಡಲ ಮಾರ್ಪಾಡಿ-ಕಲ್ಲಬೆಟ್ಟು ಇದರ ವತಿಯಿಂದ ಆಳ್ವಾಸ್ ಹೆಲ್ತ್ ಸೆಂಟರ್ ಸಹಕಾರದೊಂದಿಗೆ ಡಾ.ಸುಧಾಕರ ಶೆಟ್ಟಿ ನೇತ್ರತ್ವದಲ್ಲಿ ಸೋಮವಾರ ನಡ್ಯೋಡಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.
ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ತಜ್ಞ ಡಾ.ಸುಧಾಕರ ಶೆಟ್ಟಿ ಪುಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ದ.ಕ ಮತ್ತು ಉಡುಪಿ ಜಿಲ್ಲೆಯ ಆಯ್ದ ಐವತ್ತು ಗ್ರಾಮಗಳಲ್ಲಿ ಶೀಘ್ರದಲ್ಲೆ ಉಚಿತ ಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ' ಪ್ರಾರಂಭಿಸಲಾಗುವುದು ಎಂದು ಹೇಳಿದರು. ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆಯು ಅವರ ಬೆಳವಣಿಗೆ ಕುಂಠಿತ ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲು ಮಿಜಾರು, ಕಟೀಲು, ಮುಲ್ಕಿ, ಎಕ್ಕಾರು, ಮಾರ್ಪಾಡಿ, ಪಡುಬಿದ್ರೆ ಸಹಿತ ಅವಳಿ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಈಗಾಗಲೇ ಸರ್ವೆ ಕಾರ್ಯಕ್ರಮ ನಡೆಯುತ್ತಿದೆ. ಡಿಸೆಂಬರ್ನಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಿ ನಂತರ ಉಚಿತಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ’ ಆರಂಭಿಸಲಾಗುವುದು ಎಂದು ಹೇಳಿದರು.
ನಡ್ಯೋಡಿ ಶಾಲೆಯಲ್ಲಿ ಒಟ್ಟು ೨೮ ಮಕ್ಕಳ ತಪಾಸಣೆ ನಡೆಸಲಾಯಿತು. ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ, ಕಾರ್ಯದರ್ಶಿ ಸೌಮ್ಯ ಎಸ್. ಶೆಟ್ಟಿ ಹಾಗೂ ಸದಸ್ಯರು ನಡ್ಯೋಡಿ ಮಹಿಳಾ ಮಂಡಲ ಅಧ್ಯಕ್ಷೆ ಗೀತಾ ಪಿ. ಶೆಟ್ಟಿ, ಕಾರ್ಯದರ್ಶಿ ಹೇಮಾವತಿ ಆರ್. ಪೂಜಾರಿ ಮತ್ತಿತರ ಸದಸ್ಯರು ಭಾಗವಹಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…