ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನ ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ. 06 ರಂದು ನಡೆಯಲಿದೆ.
ಸಮ್ಮೇಳನದಲ್ಲಿ ತಾಲೂಕಿನ 18ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಡೇಶಿವಾಲಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿದ್ದಾರೆ. ಸಾನ್ವಿಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿ ಪುತ್ರಿ.
ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು. ಸಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೋಗ್ರಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಕಡೇಶಿವಾಲಯ ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ತಿಳಿಸಿರುತ್ತಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…