ಮೂಡುಬಿದಿರೆ: ಲಯನ್ಸ್ ಕ್ಲಬ್ ಮೂಡುಬಿದಿರೆ ಇದರ ವಲಯ ಸಾಮಾಜಿಕ ಕಾರ್ಯಕ್ರಮವು ಕ್ಲಬ್ ಅಧ್ಯಕ್ಷ ಜೊಸ್ಸಿ ಮಿನೇಜಸ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಕೀರ್ತಿನಗರದ ಲಯನ್ಸ್ ಪಾರ್ಕ್ ಸಭಾಂಗಣದಲ್ಲಿ ಜರಗಿತು.
ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ 12ರಡಿ ಬರುವ ವಲಯಾಧ್ಯಕ್ಷ ಲ. ಎಂ.ಕೆ. ದಿನೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸೇವಾ ಕಾರ್ಯಕ್ರಮದ ಅಂಗವಾಗಿ ಕ್ಲಬ್ ವತಿಯಿಂದ ವೆಂಕಟರಮಣ ಭಟ್ ಅವರಿಗೆ ವೀಲ್ ಚೇರ್ ವಿತರಿಸಲಾಯಿತು. ಕಲ್ಲಮುಂಡ್ಕೂರಿನ ಸಂದೀಪ್ ಶೆಟ್ಟಿ, ಎಂಬವರ ಡಯಾಲಿಸಿಸ್ ಚಿಕಿತ್ಸೆಗೆ ಕ್ಲಬ್ ಸದಸ್ಯ ಪ್ರಶಾಂತ್ ಶೆಟ್ಟಿಯವರ ಕೊಡುಗೆ ರೂ.10ಸಾವಿರ ಮತ್ತು ಮಾರೂರಿನ ರಾಜೇಶ್ ಆಚಾರ್ಯ ಅವರ ಚಿಕಿತ್ಸೆಗೆ ವಲಯಾಧ್ಯಕ್ಷರು ನೀಡಿರುವ ಕೊಡುಗೆಯನ್ನು ಹಸ್ತಾಂತರಿಸಲಾಯಿತು. ವಲಯ ಸಾಮಾಜಿಕ ಕಾರ್ಯಕ್ರಮದ ಪ್ರಾಯೋಜಕ ಮೆಲ್ವಿನ್ ಡಿಕೋಸ್ತ ವಲಯಾಧ್ಯಕ್ಷರನ್ನು ಸಭೆಗೆ ಪರಿಚಯಿಸಿದರು. ವಲಯಾಧ್ಯಕ್ಷ ಎಂ.ಕೆ. ದಿನೇಶ್ ಮತ್ತು ಶಾಂತಿ ದಿನೇಶ್ ದಂಪತಿಯನ್ನು ಸನ್ಮಾನಿಸ ಲಾಯಿತು.
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮತ್ತು ಜಿಎಮ್ ಟಿ ಸಂಯೋಜಕ ರಾಜು ಶೆಟ್ಟಿ, ಶುಭಾಶಂಸನೆಗೈದರು. ಕ್ಲಬ್ನ ಪ್ರಥಮ ಮಹಿಳೆ ವಿಲ್ಮಾ ಮಿನೇಜಸ್, ಉಮೇಶ್ ಶೆಟ್ಟಿ ಬೆಳ್ತಂಗಡಿ, ರವಿ ಶೆಟ್ಟಿ ಸುಕ್ಕೇರಿ, ನಿರಂಜನ್ ವೇಣೂರು, ಕ್ಲಬ್ ಕಾರ್ಯದರ್ಶಿ ಓಸ್ವಾಲ್ಡ್ ಡಿಕೋಸ್ತಾ , ಖಜಾಂಚಿ ಹರೀಶ್ ತಂತ್ರಿ, ಹಿರಿಯ ಸದಸ್ಯರಾದ ಕೆ. ಶ್ರೀಪತಿ ಭಟ್, ಕುಮಾರ್, ಶಿವಪ್ರಸಾದ್ ಉಪಸ್ಥಿತರಿದ್ದರು.
ಅಧ್ಯಕ್ಷ ಜೊಸ್ಸಿ ಮಿನೇಜಸ್ ಸ್ವಾಗತಿಸಿದರು. ಜಯರಾಮ ಶೆಟ್ಟಿಗಾರ್ ಧ್ವಜವಂದನೆ ನೆರವೇರಿಸಿದರು. ಅನಿಲ್ ಮೆಂಡೋನ್ಸಾ ನೀತಿ ಸಂಹಿತೆ ಪಠಿಸಿದರು. ಓಸ್ವಾಲ್ಡ್ ಡಿ’ಕೋಸ್ತಾ ವಂದಿಸಿದರು. ಜಾನ್ ರೇಗೋ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…