ಮೂಡುಬಿದಿರೆ: ಲಯನ್ಸ್ ಕ್ಲಬ್ ಮೂಡುಬಿದಿರೆ ಇದರ ವಲಯ ಸಾಮಾಜಿಕ ಕಾರ್ಯಕ್ರಮವು ಕ್ಲಬ್ ಅಧ್ಯಕ್ಷ ಜೊಸ್ಸಿ ಮಿನೇಜಸ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಕೀರ್ತಿನಗರದ ಲಯನ್ಸ್ ಪಾರ್ಕ್ ಸಭಾಂಗಣದಲ್ಲಿ ಜರಗಿತು.
ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ 12ರಡಿ ಬರುವ ವಲಯಾಧ್ಯಕ್ಷ ಲ. ಎಂ.ಕೆ. ದಿನೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸೇವಾ ಕಾರ್ಯಕ್ರಮದ ಅಂಗವಾಗಿ ಕ್ಲಬ್ ವತಿಯಿಂದ ವೆಂಕಟರಮಣ ಭಟ್ ಅವರಿಗೆ ವೀಲ್ ಚೇರ್ ವಿತರಿಸಲಾಯಿತು. ಕಲ್ಲಮುಂಡ್ಕೂರಿನ ಸಂದೀಪ್ ಶೆಟ್ಟಿ, ಎಂಬವರ ಡಯಾಲಿಸಿಸ್ ಚಿಕಿತ್ಸೆಗೆ ಕ್ಲಬ್ ಸದಸ್ಯ ಪ್ರಶಾಂತ್ ಶೆಟ್ಟಿಯವರ ಕೊಡುಗೆ ರೂ.10ಸಾವಿರ ಮತ್ತು ಮಾರೂರಿನ ರಾಜೇಶ್ ಆಚಾರ್ಯ ಅವರ ಚಿಕಿತ್ಸೆಗೆ ವಲಯಾಧ್ಯಕ್ಷರು ನೀಡಿರುವ ಕೊಡುಗೆಯನ್ನು ಹಸ್ತಾಂತರಿಸಲಾಯಿತು. ವಲಯ ಸಾಮಾಜಿಕ ಕಾರ್ಯಕ್ರಮದ ಪ್ರಾಯೋಜಕ ಮೆಲ್ವಿನ್ ಡಿಕೋಸ್ತ ವಲಯಾಧ್ಯಕ್ಷರನ್ನು ಸಭೆಗೆ ಪರಿಚಯಿಸಿದರು. ವಲಯಾಧ್ಯಕ್ಷ ಎಂ.ಕೆ. ದಿನೇಶ್ ಮತ್ತು ಶಾಂತಿ ದಿನೇಶ್ ದಂಪತಿಯನ್ನು ಸನ್ಮಾನಿಸ ಲಾಯಿತು.
ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮತ್ತು ಜಿಎಮ್ ಟಿ ಸಂಯೋಜಕ ರಾಜು ಶೆಟ್ಟಿ, ಶುಭಾಶಂಸನೆಗೈದರು. ಕ್ಲಬ್ನ ಪ್ರಥಮ ಮಹಿಳೆ ವಿಲ್ಮಾ ಮಿನೇಜಸ್, ಉಮೇಶ್ ಶೆಟ್ಟಿ ಬೆಳ್ತಂಗಡಿ, ರವಿ ಶೆಟ್ಟಿ ಸುಕ್ಕೇರಿ, ನಿರಂಜನ್ ವೇಣೂರು, ಕ್ಲಬ್ ಕಾರ್ಯದರ್ಶಿ ಓಸ್ವಾಲ್ಡ್ ಡಿಕೋಸ್ತಾ , ಖಜಾಂಚಿ ಹರೀಶ್ ತಂತ್ರಿ, ಹಿರಿಯ ಸದಸ್ಯರಾದ ಕೆ. ಶ್ರೀಪತಿ ಭಟ್, ಕುಮಾರ್, ಶಿವಪ್ರಸಾದ್ ಉಪಸ್ಥಿತರಿದ್ದರು.
ಅಧ್ಯಕ್ಷ ಜೊಸ್ಸಿ ಮಿನೇಜಸ್ ಸ್ವಾಗತಿಸಿದರು. ಜಯರಾಮ ಶೆಟ್ಟಿಗಾರ್ ಧ್ವಜವಂದನೆ ನೆರವೇರಿಸಿದರು. ಅನಿಲ್ ಮೆಂಡೋನ್ಸಾ ನೀತಿ ಸಂಹಿತೆ ಪಠಿಸಿದರು. ಓಸ್ವಾಲ್ಡ್ ಡಿ’ಕೋಸ್ತಾ ವಂದಿಸಿದರು. ಜಾನ್ ರೇಗೋ ಕಾರ್ಯಕ್ರಮ ನಿರೂಪಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…