ಮುಲ್ಕಿ: ಸನಾತನ ಆದರ್ಶ ಪುರುಷ , ರಾಮಾಯಣ ಮಹಾ ಕಾವ್ಯ ರಚನೆಕಾರ ಮಹರ್ಷಿ ವಾಲ್ಮೀಕಿಯ ಜೀವನದ ಆದರ್ಶ ತತ್ವಗಳನ್ನು ಯುವ ಜನಾಂಗ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕಾಗಿದೆ ಎಂದು ಮುಲ್ಕಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕೆ. ಹೇಳಿದರು.

ಅವರು ಮುಲ್ಕಿ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ಈ ಸಂದರ್ಭ ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಅಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು



