ಮುಲ್ಕಿ: ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇತ್ತೀಚೆಗೆ ದೇವಳದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಭಕ್ತರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ವೈಭವದಿಂದ ಸಂಪನ್ನಗೊಂಡಿದ್ದು ಈ ಹಿನ್ನಲೆಯಲ್ಲಿ ದೇವಳದ ಸಭಾಂಗಣದಲ್ಲಿ ಊರ ಪರವೂರ ಭಕ್ತರ ಹಾಗೂ ಗ್ರಾಮಸ್ಥರ ವಿಶೇಷ ಸಭೆ ನಡೆಯಿತು.

ಸಭೆಯಲ್ಲಿ ಸಮಗ್ರ ಜೀರ್ಣೋದ್ಧಾರದ ಲೆಕ್ಕಪತ್ರ ಹಾಗೂ . ಮುಂದಿನ ಕಾರ್ಯಯೋಜನೆಗಳ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ರವರು ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ದೇವಸ್ಥಾನದ ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪೂರ್ತಿಗೊಳಿಸಲು ಭಕ್ತರ ಹಾಗೂ ದಾನಿಗಳ ಸಹಕಾರ ಬೇಕು ಎಂದರು
ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಮೋಹನದಾಸ್, ಬೆಂಗಳೂರು ಸಮಿತಿಯ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




