ಜನ ಮನದ ನಾಡಿ ಮಿಡಿತ

Advertisement

ಬೈಕ್ ಕಳವು : ಅಂತರ್ ಜಿಲ್ಲೆ ಚೋರರನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ.


ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯ ವೀರೇಂದ್ರ ಬಂಧಿತರು.

ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ದ್ವಿಚಕ್ರ ವಾಹನವನ್ನು ನಿಲ್ಲಿಸಲು ಹೇಳಿದಾಗ ವಾಹನವನ್ನು ನಿಲಿಸದೇ ವಾಪಾಸು ಹಿಂತಿರುಗಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸ್ ನಿರೀಕ್ಷಕ ಸಂದೇಶ್ ಹಾಗೂ ಸಿಬ್ಬಂದಿಯವರು ಅವರುಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ KA 47, L 9678 ನೇ ಹೀರೋ ಸೂಪರ್ ಮೋಟಾರು ಸೈಕಲ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಜೈನ್ ಪಿ.ಯು ಕಾಲೇಜಿನ ಎದುರು ಇರುವ ಅರ್ಹತ್ ಅಪಾರ್ಟ್ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ KA-19-HD-4034 ನಂಬರಿನ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳಿಂದ ಒಟ್ಟು ಅಂದಾಜು ಮೌಲ್ಯ 1,80,000/- ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್ IPS (ಕಾ&ಸು), ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಸಿಬಂದಿಗಳು ಕಾರ್ಯಚರಣೆ ನಡೆಸಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!