ಜನ ಮನದ ನಾಡಿ ಮಿಡಿತ

Advertisement

ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ

ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿ ನಡೆದಿದೆ.


ವೀಕ್ಷಿತ್ ಎಂಬವರ ಮನೆಯಿಂದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದು ಕಳವು ನಡೆದಿದೆ ಎಂದು ದೂರು ನೀಡಿದ್ದಾರೆ. ಬಿಸಿರೋಡಿನ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ಇವರು ಬೆಳಿಗ್ಗೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಾಗಿಲ‌ ಸಮೀಪ ಇಟ್ಟು ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಸೋಪಾದ ಮೇಲೆ ಕೀ ಬಿದ್ದುಕೊಂಡಿತ್ತು.


ಮನೆಯ ಒಳಗೆ ಹೋಗಿ ನೋಡಿದಾಗ ಗಾಡ್ರೆಜ್ ಬಾಗಿಲು ತೆರದಿತ್ತು. ಅದರಲ್ಲಿ ಇರಿಸಲಾಗಿದ್ದ 67 ಗ್ರಾಂ ತೂಕದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನ ಹಾಗೂ 5 ಸಾವಿರ ರೂ ನಗದನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!