ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿ ನಡೆದಿದೆ.
ವೀಕ್ಷಿತ್ ಎಂಬವರ ಮನೆಯಿಂದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದು ಕಳವು ನಡೆದಿದೆ ಎಂದು ದೂರು ನೀಡಿದ್ದಾರೆ. ಬಿಸಿರೋಡಿನ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ಇವರು ಬೆಳಿಗ್ಗೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಾಗಿಲ ಸಮೀಪ ಇಟ್ಟು ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಸೋಪಾದ ಮೇಲೆ ಕೀ ಬಿದ್ದುಕೊಂಡಿತ್ತು.
ಮನೆಯ ಒಳಗೆ ಹೋಗಿ ನೋಡಿದಾಗ ಗಾಡ್ರೆಜ್ ಬಾಗಿಲು ತೆರದಿತ್ತು. ಅದರಲ್ಲಿ ಇರಿಸಲಾಗಿದ್ದ 67 ಗ್ರಾಂ ತೂಕದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನ ಹಾಗೂ 5 ಸಾವಿರ ರೂ ನಗದನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…