ಮೂಡುಬಿದಿರೆ: ‘ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ. ಪ್ರತಿ ಹಂತದ ಕಲಿಕೆ ಹೊಸದನ್ನು ಕಲಿಸುತ್ತದೆ. ಕಲಿಯುವ ಮನಸ್ಸು ನಮ್ಮದಾಗಿರಬೇಕು ಎಂದು ಖ್ಯಾತ ವೈದ್ಯ ಹಾಗೂ ಕರ್ನಾಟಕ ರೆಡ್ಕ್ರಾಸ್ ಸೊಸೈಟಿ ಅಧ್ಯಕ್ಷ ಡಾ. ರಾಮಚಂದ್ರ ಕೆ. ಜೋಯಿಷಿ ಹೇಳಿದರು.
ಆಳ್ವಾಸ್ ಅಲೈಡ್ ಹೆಲ್ತ್ಸೈನ್ಸ್ ಮತ್ತು ಫಿಸಿಯೋಥೆರಪಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಲಿಕೆ ಕೇವಲ ಪಠ್ಯಕ್ಕೆ ಸೀಮಿತವಲ್ಲ. ಅದು ವ್ಯಾಪಕ. ಅದು ಬದುಕಿನ ಕೊನೆ ತನಕದ ಕ್ರಿಯೆ. ಯಶಸ್ಸಿನ ಪಯಣದಲ್ಲಿ ಪ್ರತಿಭೆ, ಜ್ಞಾನ, ಕಠಿಣ ಪರಿಶ್ರಮ, ಆತ್ಮಸ್ಥೈರ್ಯ, ಆತ್ಮ ವಿಶ್ವಾಸ ಬಹಳ ಮುಖ್ಯ. ಬದುಕು ಹೂವಿನ ಹಾಸಿಗೆಯಲ್ಲ ಎಂದರು.
ಯಶಸ್ಸಿನಲ್ಲಿ ಬುದ್ಧಿಮತ್ತೆ ಮತ್ತು ಭಾವನಾತ್ಮಕತೆಯ ನಂಟು ಹಾಗೂ ಜ್ಞಾನದ ಬಳಕೆ ಅಗತ್ಯ. ಕೇವಲ ಬುದ್ಧಿಮತ್ತೆಯೇ ಹೆಚ್ಚಿದರೂ ಸೋಲುತ್ತೇವೆ. ಭಾವನೆಗಳ ಸ್ಪಂದನೆ ಇರಬೇಕು. ನಾವು ಏನೇ ಆದರೂ, ಪರಿಸರಕ್ಕೆ ಹೊಂದಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದರು. ಆಳ್ವಾಸ್ ಹೆಲ್ತ್ ಸೆಂಟರ್ನ ಆರಂಭದ ದಿನಗಳಲ್ಲಿ ಕೆಲಸ ಮಾಡಿದ ನೆನಪನ್ನು ಹಂಚಿಕೊಂಡ ಅವರು, ಇಂದು ಈ ಹೆಲ್ತ್ ಸೆಂಟರ್ ಮೂಡುಬಿದಿರೆ ಭಾಗದ ಜನರಿಗೆ ನೀಡುತ್ತಿರುವ ಸೇವೆಯನ್ನು ಶ್ಲಾಘಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಡಾ. ವಿನಯ್ ಆಳ್ವ ಮಾತನಾಡಿ, ‘ವೈದ್ಯಕೀಯ ಚಿಕಿತ್ಸಾ ಪದ್ಧತಿಯು ಒಂದು ರಥದ ಹಾಗೆ. ಇಲ್ಲಿ ಕೇವಲ ವೈದ್ಯರು ಮಾತ್ರವಲ್ಲ, ಎಲ್ಲರೂ ಮುಖ್ಯ. ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ವಿಭಾಗಗಳ ಮಧ್ಯೆ ಹೋಲಿಕೆ ಸಲ್ಲದು. ನಾವು ಆಯ್ಕೆ ಮಾಡಿದ ಕೋರ್ಸ್ನಲ್ಲಿ ನಮ್ಮ ಜ್ಞಾನ ಮತ್ತು ಕೌಶಲ ಬೆಳೆಸಿಕೊಳ್ಳಬೇಕು. ಅದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು’ ಎಂದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…