ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಒಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದುವರೆ ತಾಸುಗಳ ಕಾಲ ಟ್ರಾಪಿಕ್ ಸಮಸ್ಯೆ ಉಂಟಾಗಿದ್ದು,ಪ್ರಯಾಣಿಕರು ಸಿಲುಕಿಕೊಂಡ ಘಟನೆ ನಡೆಯಿತು.
ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ ಅರಫಾ ಬಸ್ ನ ವೀಲ್ ಜಾಮ್ ಉಂಟಾದ ಕಾರಣ ಪಾಣೆಮಂಗಳೂರು ಹೊಸ ಸೇತುವೆ ಮಧ್ಯ ಭಾಗದಲ್ಲಿ ನಿಂತಿತ್ತು. ಸೇತುವೆ ಮಧ್ಯ ಭಾಗದಲ್ಲಿ ಬಸ್ ಕೆಟ್ಟು ನಿಂತ ಪರಿಣಾಮ ಎರಡು ಕಡೆಯಿಂದ ಬರುವ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಅನೇಕ ದಿನಗಳಿಂದ ಪಾಣೆಮಂಗಳೂರು ಸೇತುವೆ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.
ಇಂದು ಕೂಡ ಸಂಜೆ ಸುಮಾರು 5.30 ರ ವೇಳೆ ಕೆಟ್ಟು ನಿಂತಿದ್ದ ಬಸ್ ಸುಮಾರು 7 ಗಂಟೆವೆರೆಗೆ ಅಲ್ಲೇ ಉಳಿದಿತ್ತು. ಬಳಿಕ ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಒಂದು ಬದಿಗೆ ಎಳೆದ ತಂದು ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು. ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಸಾಮರ್ಥ್ಯದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಇದೆ. ಕಳೆದ ಬಾರಿ ಹೊಸ ಸೇತುವೆಯಲ್ಲಿ ಬ್ಲಾಕ್ ಆದ ಸಂದರ್ಭದಲ್ಲಿ ಹಳೆಯ ಸೇತುವೆಯಲ್ಲಿ ಪ್ರಯಾಣಿಕ್ಕೆ ಅವಕಾಶ ನೀಡಲಾಗಿತ್ತು.ಆದರೆ ಪ್ರಸ್ತುತ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂಬುದನ್ನು ಇಲಾಖೆ ಅದೇಶ ಹೊರಡಿಸಿದೆ.
ಟ್ರಾಫಿಕ್ ಜಾಮ್ ಉಂಟಾದ ವೇಳೆ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ಎ ಸ್.ಐ.ಸುತೇಶ್ಎ .ಎಸ್.ಐ.ಗಳಾದ ವಿಜಯ್ ,ಸುರೇಶ್ ಪಡಾರ್,ಸಿಬ್ಬಂದಿಗಳಾದ ರಮೇಶ್, ಅಭಿಷೇಕ್ ಸಮಸ್ಯೆ ನಿವಾರಿಸಲು ಹರಸಾಹಸ ಪಟ್ಟರು. ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಸ್ಥಳದಿಂದ ತೆರವುಗೊಳಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…