ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಒಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದುವರೆ ತಾಸುಗಳ ಕಾಲ ಟ್ರಾಪಿಕ್ ಸಮಸ್ಯೆ ಉಂಟಾಗಿದ್ದು,ಪ್ರಯಾಣಿಕರು ಸಿಲುಕಿಕೊಂಡ ಘಟನೆ ನಡೆಯಿತು.
ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ ಅರಫಾ ಬಸ್ ನ ವೀಲ್ ಜಾಮ್ ಉಂಟಾದ ಕಾರಣ ಪಾಣೆಮಂಗಳೂರು ಹೊಸ ಸೇತುವೆ ಮಧ್ಯ ಭಾಗದಲ್ಲಿ ನಿಂತಿತ್ತು. ಸೇತುವೆ ಮಧ್ಯ ಭಾಗದಲ್ಲಿ ಬಸ್ ಕೆಟ್ಟು ನಿಂತ ಪರಿಣಾಮ ಎರಡು ಕಡೆಯಿಂದ ಬರುವ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಅನೇಕ ದಿನಗಳಿಂದ ಪಾಣೆಮಂಗಳೂರು ಸೇತುವೆ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.
ಇಂದು ಕೂಡ ಸಂಜೆ ಸುಮಾರು 5.30 ರ ವೇಳೆ ಕೆಟ್ಟು ನಿಂತಿದ್ದ ಬಸ್ ಸುಮಾರು 7 ಗಂಟೆವೆರೆಗೆ ಅಲ್ಲೇ ಉಳಿದಿತ್ತು. ಬಳಿಕ ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಒಂದು ಬದಿಗೆ ಎಳೆದ ತಂದು ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು. ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಸಾಮರ್ಥ್ಯದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಇದೆ. ಕಳೆದ ಬಾರಿ ಹೊಸ ಸೇತುವೆಯಲ್ಲಿ ಬ್ಲಾಕ್ ಆದ ಸಂದರ್ಭದಲ್ಲಿ ಹಳೆಯ ಸೇತುವೆಯಲ್ಲಿ ಪ್ರಯಾಣಿಕ್ಕೆ ಅವಕಾಶ ನೀಡಲಾಗಿತ್ತು.ಆದರೆ ಪ್ರಸ್ತುತ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂಬುದನ್ನು ಇಲಾಖೆ ಅದೇಶ ಹೊರಡಿಸಿದೆ.
ಟ್ರಾಫಿಕ್ ಜಾಮ್ ಉಂಟಾದ ವೇಳೆ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ಎ ಸ್.ಐ.ಸುತೇಶ್ಎ .ಎಸ್.ಐ.ಗಳಾದ ವಿಜಯ್ ,ಸುರೇಶ್ ಪಡಾರ್,ಸಿಬ್ಬಂದಿಗಳಾದ ರಮೇಶ್, ಅಭಿಷೇಕ್ ಸಮಸ್ಯೆ ನಿವಾರಿಸಲು ಹರಸಾಹಸ ಪಟ್ಟರು. ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಸ್ಥಳದಿಂದ ತೆರವುಗೊಳಿಸಿದರು.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…