ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಒಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದುವರೆ ತಾಸುಗಳ ಕಾಲ ಟ್ರಾಪಿಕ್ ಸಮಸ್ಯೆ ಉಂಟಾಗಿದ್ದು,ಪ್ರಯಾಣಿಕರು ಸಿಲುಕಿಕೊಂಡ ಘಟನೆ ನಡೆಯಿತು.
ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ ಅರಫಾ ಬಸ್ ನ ವೀಲ್ ಜಾಮ್ ಉಂಟಾದ ಕಾರಣ ಪಾಣೆಮಂಗಳೂರು ಹೊಸ ಸೇತುವೆ ಮಧ್ಯ ಭಾಗದಲ್ಲಿ ನಿಂತಿತ್ತು. ಸೇತುವೆ ಮಧ್ಯ ಭಾಗದಲ್ಲಿ ಬಸ್ ಕೆಟ್ಟು ನಿಂತ ಪರಿಣಾಮ ಎರಡು ಕಡೆಯಿಂದ ಬರುವ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಅನೇಕ ದಿನಗಳಿಂದ ಪಾಣೆಮಂಗಳೂರು ಸೇತುವೆ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.
ಇಂದು ಕೂಡ ಸಂಜೆ ಸುಮಾರು 5.30 ರ ವೇಳೆ ಕೆಟ್ಟು ನಿಂತಿದ್ದ ಬಸ್ ಸುಮಾರು 7 ಗಂಟೆವೆರೆಗೆ ಅಲ್ಲೇ ಉಳಿದಿತ್ತು. ಬಳಿಕ ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಒಂದು ಬದಿಗೆ ಎಳೆದ ತಂದು ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು. ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಸಾಮರ್ಥ್ಯದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಇದೆ. ಕಳೆದ ಬಾರಿ ಹೊಸ ಸೇತುವೆಯಲ್ಲಿ ಬ್ಲಾಕ್ ಆದ ಸಂದರ್ಭದಲ್ಲಿ ಹಳೆಯ ಸೇತುವೆಯಲ್ಲಿ ಪ್ರಯಾಣಿಕ್ಕೆ ಅವಕಾಶ ನೀಡಲಾಗಿತ್ತು.ಆದರೆ ಪ್ರಸ್ತುತ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂಬುದನ್ನು ಇಲಾಖೆ ಅದೇಶ ಹೊರಡಿಸಿದೆ.
ಟ್ರಾಫಿಕ್ ಜಾಮ್ ಉಂಟಾದ ವೇಳೆ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ಎ ಸ್.ಐ.ಸುತೇಶ್ಎ .ಎಸ್.ಐ.ಗಳಾದ ವಿಜಯ್ ,ಸುರೇಶ್ ಪಡಾರ್,ಸಿಬ್ಬಂದಿಗಳಾದ ರಮೇಶ್, ಅಭಿಷೇಕ್ ಸಮಸ್ಯೆ ನಿವಾರಿಸಲು ಹರಸಾಹಸ ಪಟ್ಟರು. ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಸ್ಥಳದಿಂದ ತೆರವುಗೊಳಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…