ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ದಿಢೀರ್ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಗೆ ಓರ್ವ ಯುವಕ ಬಲಿಯಾಗಿದ್ದಾನೆ.
ಕುಂದಾಪುರ ತಾಲೂಕಿನ ಆವರ್ಸೆ ಸಮೀಪ ಕಿರಾಡಿಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ. ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಅವರ ಪುತ್ರ ಪ್ರಮೋದ್ ಶೆಟ್ಟಿ (24) ಮೃತ ದುರ್ದೈವಿ.
ಈತ ನಿನ್ನೆ ರಾತ್ರಿ ಮನೆಯ ಹೊರಗೆ ಬಂದು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪ್ರಮೋದ್ ಬಡ ಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…