ದಕ್ಷಿಣ ಕನ್ನಡ : ಮೂಡಬಿದ್ರೆ ತಾಲೂಕು, ಮೂಡು ಕೋಣಾಜೆ ಗ್ರಾಮದ ಆನಂದ ಪೂಜಾರಿ ಎಂಬವರ ಜಮೀನಿಗೆ ನೀರು ಉಣಿಸುತ್ತಿದ್ದ ಕೃಷಿ ಪಂಪನ್ನು ದುಷ್ಕರ್ಮಿಗಳು ರಾತ್ರಿ ಹಾಳು ಮಾಡಿದ ಘಟನೆ ವರದಿಯಾಗಿದ್ದು, ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಪಂಪು ಸೆಟ್ಟಿನ ಬೋರಿಗೆ ಸಂಪರ್ಕಿಸುವ ಪೈಪನ್ನು ಕಿಡಿಗೇರಿಗಳು ತುಂಡರಿಸಿದ್ದು ಪಂಪು ಹಾಗೂ ಪೈಪು ಎರಡು ಬೋರ್ ವೆಲ್ ಒಳಗೆ ಸಿಲುಕಿಕೊಂಡು ಜೊತೆಗೆ ವಿದ್ಯುತ್ ಸಂಪರ್ಕಗೊಳಿಸುವ ವೈರನ್ನು ತುಂಡು ಮಾಡಿ ಬೋರ್ ನ ಒಳಗೆ ತಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಆನಂದ ಪೂಜಾರಿಯವರ ಗದ್ದೆ ಹಾಗೂ ತೋಟಕ್ಕೆ ನೀರುಣಿಸಲು ಕಷ್ಟ ಸಾಧ್ಯವಾಗುವ ಸಾಧ್ಯತೆ ಇದೆ.
ಪರಸ್ಪರ ಭೂಮಿಗೆ ಸಂಬಂಧಿಸಿದ ವ್ಯಾಜ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ವರದಿಯಾಗಿದ್ದು, ಪೊಲೀಸರ ತನಿಕೆಯಿಂದಷ್ಟೇ ಸತ್ಯ ಹೊರ ಬರಬೇಕಿದೆ,
ಸದ್ಯ ಮೂಡಬಿದ್ರೆ ತಾಲೂಕಿನಲ್ಲಿ, ಕೆಲವು ಕೃಷಿಕರು ವ್ಯಾಪ್ತಿಮೀರಿ ಅಕ್ರಮ ಸಕ್ರಮ ಭೂಮಿಯನ್ನ ಕಬಳಿಸುವ ಪ್ರಯತ್ನದಲ್ಲಿದ್ದು, ತಾಲೂಕಿನ ಹಲವು ಕಡೆ ಘರ್ಷಣೆಗೆ ಕಾರಣವಾಗುತ್ತಿದ್ದು, ತಹಶೀಲ್ದಾರರು ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಸೂಕ್ತ ಕ್ರಮ ಕೈಗೊಂಡು, ಮಿತಿ ಮೀರಿದ ಅಕ್ರಮ ಸಕ್ರಮ ಜಮೀನನ್ನು ವಶಪಡಿಸಿಕೊಂಡಲ್ಲಿ ಮಾತ್ರವೇ ಸರಕಾರಿ ಭೂಮಿ ರಕ್ಷಿಸುವುದರ ಜೊತೆಗೆ, ಕೃಷಿ ಜನರ ಒಳಗಿನ ವೈಶಮ್ಯಗಳನ್ನ ಕಡಿಮೆ ಮಾಡಬಹುದಾಗಿದೆ ಎಂಬುದು ನಾಗರೀಕರ ಅಭಿಪ್ರಾಯ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…