ಜನ ಮನದ ನಾಡಿ ಮಿಡಿತ

Advertisement

ಸಮಾಜದ ಅಭಿವೃದ್ಧಿಗೆ ಬಂಟ ಸಮುದಾಯದ ಕೊಡುಗೆ ಅಪಾರ; ಶೋಭಾ ಕರಂದ್ಲಾಜೆ

ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತವಾದ ಕ್ರಾಂತಿ ಮಾಡಿರುವ ಬಂಟ ಸಮುದಾಯ, ಸಮಾಜಕ್ಕೆ ಹಲವು ಕೊಡುಗೆಗಳನ್ನು ನೀಡಿದೆ. ದೇಶದ ರಕ್ಷಣೆ, ಅಭಿವೃದ್ಧಿ ಸಮಾಜದಲ್ಲಿ ಸ್ವಾಸ್ಯ ಕಾಪಾಡುವಲ್ಲಿ ಈ ಸಮುದಾಯದ ಕೊಡುಗೆ ಅಪಾರ ಎಂದು ಕೇಂದ್ರ ಕೃಷಿ ಮತ್ತು ರೈತರ ಅಭಿವೃದ್ಧಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.


ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವ ಬಂಟರ ಸಮ್ಮೇಳನ ಪ್ರಯುಕ್ತ ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದ ತೆರೆದ ಮೈದಾನದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬಂಟರು ಇಡೀ ಸಮಾಜದ ನೇತೃತ್ವ ವಹಿಸುವ ಸಮುದಾಯವಾಗಿದೆ. ಭೂತಸ್ಥಾನ, ನಾಗ, ದೇವಸ್ಥಾನ, ಗರಡಿಯಲ್ಲಿ ನಡೆಯುವ ಯಾವುದೇ ಕಾರ್ಯಗಳ ನೇತೃತ್ವವನ್ನು ಬಂಟ ಸಮುದಾಯ ವಹಿಸಿದರೆ ಅದು ಅಚ್ಚುಕಟ್ಟಾಗಿ ಇರುತ್ತದೆ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕವಾಗಿ ನೇತೃತ್ವ ವಹಿಸುವ ಗಟ್ಟಿ ಸಮುದಾಯ ಆಗಿದೆ. ಶಿಕ್ಷಿತ ಹಾಗೂ ಸುಸಂಸ್ಕೃತ ಸಮುದಾಯದವರಾಗಿರುವ ಬಂಟರು, ತಮ್ಮ ಸಂಸ್ಕೃತಿ ಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ ಎಂದರು.


ಇದೇ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ವೇದಿಕೆಯಲ್ಲಿ ಅಭಿನಂದಿಸಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ ಉಪಸ್ಥಿತರಿದ್ದರು.
ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕತಿಕ ಕಲಾ ಬೈಭವದ ತೀರ್ಪುಗಾರರಾಗಿ ಕಾಂತಾರ ಖ್ಯಾತಿಯ ನಟಿ ಮಾನಸಿ ಸುಧೀರ್, ನೃತ್ಯ ಕಲಾವಿದೆ ಪ್ರಥಮ ಪ್ರಸಾದ್ ರಾವ್, ಧಾರವಾಹಿ ನಟ ದಿಲೀಪ್ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!