ಜನ ಮನದ ನಾಡಿ ಮಿಡಿತ

Advertisement

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ: ಶಾಸಕ ಯಶ್ ಪಾಲ್ ಸುವರ್ಣ


ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.


ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು.
ಶೀಘ್ರದಲ್ಲಿಯೇ ಜಿಲ್ಲೆಯ ಎಲ್ಲಾ ಶಾಸಕರು ಜಿಲ್ಲಾಡಳಿತದೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.


5 ತಿಂಗಳು ಕಳೆದರೂ ನಡೆಯದ ಪ್ರಗತಿ ಪರಿಶೀಲನಾ ಸಭೆ:


ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು 5 ತಿಂಗಳು ಕಳೆದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯದೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿದೆ.


ವಿವಿಧ ಇಲಾಖೆಗಳ ಹಲವಾರು ಯೋಜನೆಗಳ ಅನುದಾನ ಬಿಡುಗಡೆಯಾಗದೇ ಅತಂತ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕು ಎಂದು ಒತ್ತಾಯಿಸಿದ್ರು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!