ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು.
ಶೀಘ್ರದಲ್ಲಿಯೇ ಜಿಲ್ಲೆಯ ಎಲ್ಲಾ ಶಾಸಕರು ಜಿಲ್ಲಾಡಳಿತದೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.
5 ತಿಂಗಳು ಕಳೆದರೂ ನಡೆಯದ ಪ್ರಗತಿ ಪರಿಶೀಲನಾ ಸಭೆ:
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು 5 ತಿಂಗಳು ಕಳೆದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯದೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿದೆ.
ವಿವಿಧ ಇಲಾಖೆಗಳ ಹಲವಾರು ಯೋಜನೆಗಳ ಅನುದಾನ ಬಿಡುಗಡೆಯಾಗದೇ ಅತಂತ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕು ಎಂದು ಒತ್ತಾಯಿಸಿದ್ರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…