ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ,ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಕಾರಣಕ್ಕಾಗಿ ತಂಗಿ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು.ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಲವ್ ಮ್ಯಾರೇಜ್
ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅಗಸ್ಟ್ .14 ರಂದು ಮದುವೆಯಾಗಿತ್ತು.
ಮಗಳ ಮದುವೆಗಾಗಿ ತಂದೆ 18 ಪವನ್ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು.
ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು. ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…