ಮೂಡುಬಿದಿರೆ : ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ ಅಜೆಕಾರು ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಅಲ್ಲದೆ ಗ್ರಾಮೋತ್ಸವದ ಮೂಲಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು.
ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ.
10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು.
ಇವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…