ಮೂಡುಬಿದಿರೆ : ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ ಅಜೆಕಾರು ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಅಲ್ಲದೆ ಗ್ರಾಮೋತ್ಸವದ ಮೂಲಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು.
ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ.
10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು.
ಇವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…