ಪುತ್ತೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್(೯೮) ವಯೋಸಹಜ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದಿದ್ದ ನಾರಾಯಣ ಭಟ್ ಅವರು ಯಕ್ಷಗಾನ ಹಾಸ್ಯ ಪಾತ್ರದಲ್ಲಿ ಮನೆ ಮಾತಾಗಿದ್ದರು. ತನ್ನ ೧೪ನೇ ವಯಸ್ಸಿನಲ್ಲಿಯೇ ಯಕ್ಷರಂಗ ಪ್ರವೇಶ ಮಾಡಿದ್ದ ಅವರು ಮೊದಲಿಗೆ ಧರ್ಮಸ್ಥಳ ಮೇಳದಲ್ಲಿ ಸೇವೆ ಆರಂಭಿಸಿದ್ದ ಅವರು ಬಳಿಕ ತನ್ನ ಸ್ವಂತ `ಮೂಲ್ಕಿ ಮೇಳ’ವನ್ನು ಕಟ್ಟಿಕೊಂಡು ಸುಮಾರು ೧೩ ವರ್ಷಗಳ ಕಾಲ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಬಳಿಕ ಸುರತ್ಕಲ್ ಮೇಳದಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ ಮತ್ತು ಮಾನ್ಯತೆ ತಂದು ಕೊಟ್ಟಿರುವ ಹಾಸ್ಯ ಕಲಾವಿದರಾದ ಅವರು ಪಾಪಣ್ಣ ವಿಜಯ' ಪ್ರಸಂಗದಲ್ಲಿಪಾಪಣ್ಣ’ ಪಾತ್ರದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಮನ್ನಣೆಯನ್ನು ಗಳಿಸಿದ್ದರು. ದಮಯಂತಿ ಪುನರ್ಸ್ವಯಂವರ' ಪ್ರಸಂಗದಲ್ಲಿಬಾಹುಕ’ ಪಾತ್ರ ನಿರ್ವಹಿಸಿ ಪಾತ್ರಕ್ಕೆ ಹೊಸ ರೂಪ ನೀಡಿದ್ದರು. ಪೌರಾಣಿಕ ಪ್ರಸಂಗಗಳಲ್ಲಿ ಬಹುತೇಕ ಎಲ್ಲಾ ಪಾತ್ರಗಳನ್ನು ನಿರ್ವಹಿಸಿದ್ದ ಅವರು ತುಳು ಪ್ರಸಂಗಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದ ಕಲಾವಿದ.
ಪದ್ಯಾಣ ಕುಟುಂಬದ ನಾರಾಯಣ ಭಟ್ ಅವರು ತನ್ನ ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡು ಪೆರುವಡಿಯಲ್ಲಿನ ಅಜ್ಜನ ಮನೆಯಲ್ಲಿ ಬೆಳೆದಿದ್ದರು. ಅಲ್ಲಿಯೇ ಯಕ್ಷರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಅದರಿಂದಾಗಿ ಅವರು ಪೆರುವಡಿ ನಾರಾಯಣ ಭಟ್ ಎಂದೇ ಪ್ರಸಿದ್ದರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಮೃತರ ಅಂತಿಮ ಕ್ರಿಯೆ ಬುಧವಾರ ಬೆಳಗ್ಗೆ ಚಿಕ್ಕಪುತ್ತೂರಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…