ಹಳೆಯಂಗಡಿಯಲ್ಲಿ ನ.4-11 ವರೆಗೆ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ
ಹಳೆಯಂಗಡಿ: ಮೂರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಸುವರ್ಣ ಮಹೋತ್ಸವ ಹಾಗೂ ಶ್ರೀ ವಿದ್ಯಾ ವಿನಾಯಕ ರಜತ ಸೇವಾಟ್ರಸ್ಟ್ ದ ಬೆಳ್ಳಿ ಹಬ್ಬ ಮಹೋತ್ಸವ ನ.4 ರಿಂದ 11 ರವೆರೆಗೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಅಮೀನ್ ಹೇಳಿದರು .
ಉತ್ಸವದ ಅಂಗವಾಗಿ ಯುವಕ ಮಂಡಲದ ಬೊಳ್ಳೂರು ವಾರಿಜ ವಾಸುದೇವ ಕಲಾ ವೇದಿಕೆಯಲ್ಲಿ ತುಳು ನಾಟಕ ಸ್ಪರ್ಧೆ, ವೈವಿಧ್ಯಮಯ ಪ್ರತಿಭಾ ಸ್ಪರ್ಧೆ, ಎಚ್.ನಾರಾಯಣ ಸನಿಲ್ ದತ್ತಿ ಬಹುಮಾನ ಮತ್ತು ವಿದ್ಯಾರ್ಥಿ ವೇತನ , ಮುಕ್ತ ಭಜನಾ ಸ್ಪರ್ಧೆ, ಯುವಕ ಮಂಡಲ, ಯುವತಿ ಮತ್ತುಮಹಿಳಾ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್, ಕಾರ್ಯಾಧ್ಯಕ್ಷ ಸುಧಾಕರ ಅಮೀನ್, ಗೌ.ಪ್ರ.ಕಾರ್ಯದರ್ಶಿ ರಾಮದಾಸ್ ಪಾವಂಜೆ, ಕೋಶಾಧಿಕಾರಿ ಪರಮೇಶ್ವರ ಪಿ., ರಜತ ಸೇವಾ ಟ್ರಸ್ಟ್ ದ ಗೌ.ಪ್ರ. ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಟಿ.ಜಿ., ಸಲಹಾ ಸಮಿತಿದ ಮೋಹನ್ ಬಂಗೇರ, ಹಿಮಕರ ಕೋಟ್ಯಾನ್, ಹನುಮಂತ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು .
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…