ಹಳೆಯಂಗಡಿಯಲ್ಲಿ ನ.4-11 ವರೆಗೆ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ
ಹಳೆಯಂಗಡಿ: ಮೂರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಸುವರ್ಣ ಮಹೋತ್ಸವ ಹಾಗೂ ಶ್ರೀ ವಿದ್ಯಾ ವಿನಾಯಕ ರಜತ ಸೇವಾಟ್ರಸ್ಟ್ ದ ಬೆಳ್ಳಿ ಹಬ್ಬ ಮಹೋತ್ಸವ ನ.4 ರಿಂದ 11 ರವೆರೆಗೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಅಮೀನ್ ಹೇಳಿದರು .
ಉತ್ಸವದ ಅಂಗವಾಗಿ ಯುವಕ ಮಂಡಲದ ಬೊಳ್ಳೂರು ವಾರಿಜ ವಾಸುದೇವ ಕಲಾ ವೇದಿಕೆಯಲ್ಲಿ ತುಳು ನಾಟಕ ಸ್ಪರ್ಧೆ, ವೈವಿಧ್ಯಮಯ ಪ್ರತಿಭಾ ಸ್ಪರ್ಧೆ, ಎಚ್.ನಾರಾಯಣ ಸನಿಲ್ ದತ್ತಿ ಬಹುಮಾನ ಮತ್ತು ವಿದ್ಯಾರ್ಥಿ ವೇತನ , ಮುಕ್ತ ಭಜನಾ ಸ್ಪರ್ಧೆ, ಯುವಕ ಮಂಡಲ, ಯುವತಿ ಮತ್ತುಮಹಿಳಾ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್, ಕಾರ್ಯಾಧ್ಯಕ್ಷ ಸುಧಾಕರ ಅಮೀನ್, ಗೌ.ಪ್ರ.ಕಾರ್ಯದರ್ಶಿ ರಾಮದಾಸ್ ಪಾವಂಜೆ, ಕೋಶಾಧಿಕಾರಿ ಪರಮೇಶ್ವರ ಪಿ., ರಜತ ಸೇವಾ ಟ್ರಸ್ಟ್ ದ ಗೌ.ಪ್ರ. ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಟಿ.ಜಿ., ಸಲಹಾ ಸಮಿತಿದ ಮೋಹನ್ ಬಂಗೇರ, ಹಿಮಕರ ಕೋಟ್ಯಾನ್, ಹನುಮಂತ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು .
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…