ಕಿನ್ನಿಗೋಳಿ : ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾತಯತ್ ಮುಲ್ಕಿ ತಾಲೂಕು ಪಂಚಾಯತ್ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಇವುಗಳ ಸಹಕಾರದೊಂದಿಗೆ ಕೋರ್ದಬ್ಬು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಇದರ ವಾರ್ಷಿಕ ಮಹಾ ಸಭೆ ಇಂದು ಕೆಮ್ರಾಲ್ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಯ್ಯದಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಒಕ್ಕೂಟದ ಅಭಿವೃಧ್ದಿ ಕೆಲಸಗಳ ಮಾಹಿತಿ ನೀಡಿದರು. ಕೆಮ್ರಾಲ್ ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ ಸಂಜೀವಿನಿ ಒಕ್ಕೂಟದ ಹಾಗೂ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕೋರ್ದಬ್ಬು ಸಂಜೀವಿನಿ ಅಧ್ಯಕ್ಷರಾದ ಶ್ರೀಮತಿ ಗೀತಾ ಅರ್ ಶೆಟ್ಟಿ ಇವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ತಾಲೂಕು ವ್ಯಾವಸ್ಥಪಕರಾದ ಅಶೋಕ್ ಇವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಮೇಲ್ವಚಾರಕರು ಅದ ಮೋಹನ್ ಇವರು ನೂತನ ಸಮಿತಿಯನ್ನು ರಚನೆ ಮಾಡಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ಮಮತಾ ಸ್ವಾಗತಿಸಿದರು. ಮುಖ್ಯ ಪುಸ್ತಕದ ಬರಹಗಾರರಾದ ಸ್ನೇಹಿತ ಇವರು ನಿರೂಪಿಸಿದರು. ಅಮಿತಾ ಇವರು ಒಕ್ಕೂಟದ ಪೂರ್ಣ ವರದಿಯನ್ನು ಮಂಡಿಸಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ವೀಣಾ ರವರು ವಂದನಾರ್ಪನಣೆಗೈದರು. ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರು, ಸರ್ವಸದಸ್ಯರು, ಪಂಚಾಯತ್ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗುಂಪಿನ ಸದಸ್ಯರು , ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ವೇಳೆ ಒಕ್ಕೂಟದ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…