ಕಿನ್ನಿಗೋಳಿ : ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾತಯತ್ ಮುಲ್ಕಿ ತಾಲೂಕು ಪಂಚಾಯತ್ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಇವುಗಳ ಸಹಕಾರದೊಂದಿಗೆ ಕೋರ್ದಬ್ಬು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಇದರ ವಾರ್ಷಿಕ ಮಹಾ ಸಭೆ ಇಂದು ಕೆಮ್ರಾಲ್ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಯ್ಯದಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಒಕ್ಕೂಟದ ಅಭಿವೃಧ್ದಿ ಕೆಲಸಗಳ ಮಾಹಿತಿ ನೀಡಿದರು. ಕೆಮ್ರಾಲ್ ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ ಸಂಜೀವಿನಿ ಒಕ್ಕೂಟದ ಹಾಗೂ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕೋರ್ದಬ್ಬು ಸಂಜೀವಿನಿ ಅಧ್ಯಕ್ಷರಾದ ಶ್ರೀಮತಿ ಗೀತಾ ಅರ್ ಶೆಟ್ಟಿ ಇವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ತಾಲೂಕು ವ್ಯಾವಸ್ಥಪಕರಾದ ಅಶೋಕ್ ಇವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಮೇಲ್ವಚಾರಕರು ಅದ ಮೋಹನ್ ಇವರು ನೂತನ ಸಮಿತಿಯನ್ನು ರಚನೆ ಮಾಡಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ಮಮತಾ ಸ್ವಾಗತಿಸಿದರು. ಮುಖ್ಯ ಪುಸ್ತಕದ ಬರಹಗಾರರಾದ ಸ್ನೇಹಿತ ಇವರು ನಿರೂಪಿಸಿದರು. ಅಮಿತಾ ಇವರು ಒಕ್ಕೂಟದ ಪೂರ್ಣ ವರದಿಯನ್ನು ಮಂಡಿಸಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ವೀಣಾ ರವರು ವಂದನಾರ್ಪನಣೆಗೈದರು. ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರು, ಸರ್ವಸದಸ್ಯರು, ಪಂಚಾಯತ್ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗುಂಪಿನ ಸದಸ್ಯರು , ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ವೇಳೆ ಒಕ್ಕೂಟದ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…