ಕಿನ್ನಿಗೋಳಿ : ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾತಯತ್ ಮುಲ್ಕಿ ತಾಲೂಕು ಪಂಚಾಯತ್ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಇವುಗಳ ಸಹಕಾರದೊಂದಿಗೆ ಕೋರ್ದಬ್ಬು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಇದರ ವಾರ್ಷಿಕ ಮಹಾ ಸಭೆ ಇಂದು ಕೆಮ್ರಾಲ್ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಯ್ಯದಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಒಕ್ಕೂಟದ ಅಭಿವೃಧ್ದಿ ಕೆಲಸಗಳ ಮಾಹಿತಿ ನೀಡಿದರು. ಕೆಮ್ರಾಲ್ ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ ಸಂಜೀವಿನಿ ಒಕ್ಕೂಟದ ಹಾಗೂ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕೋರ್ದಬ್ಬು ಸಂಜೀವಿನಿ ಅಧ್ಯಕ್ಷರಾದ ಶ್ರೀಮತಿ ಗೀತಾ ಅರ್ ಶೆಟ್ಟಿ ಇವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ತಾಲೂಕು ವ್ಯಾವಸ್ಥಪಕರಾದ ಅಶೋಕ್ ಇವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಮೇಲ್ವಚಾರಕರು ಅದ ಮೋಹನ್ ಇವರು ನೂತನ ಸಮಿತಿಯನ್ನು ರಚನೆ ಮಾಡಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ಮಮತಾ ಸ್ವಾಗತಿಸಿದರು. ಮುಖ್ಯ ಪುಸ್ತಕದ ಬರಹಗಾರರಾದ ಸ್ನೇಹಿತ ಇವರು ನಿರೂಪಿಸಿದರು. ಅಮಿತಾ ಇವರು ಒಕ್ಕೂಟದ ಪೂರ್ಣ ವರದಿಯನ್ನು ಮಂಡಿಸಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ವೀಣಾ ರವರು ವಂದನಾರ್ಪನಣೆಗೈದರು. ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರು, ಸರ್ವಸದಸ್ಯರು, ಪಂಚಾಯತ್ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗುಂಪಿನ ಸದಸ್ಯರು , ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ವೇಳೆ ಒಕ್ಕೂಟದ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…